‘ಹುಬ್ಬಳ್ಳಿಯಲ್ಲಿ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದಡಿ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿರುವ ಬಿಹಾರದ ರಿತೇಶ್ ಕುಮಾರ್ ಮೃತದೇಹವನ್ನು ಮುಂದಿನ ತನಿಖೆಗೆ ಲಭ್ಯವಾಗುವಂತೆ ಸುಡದೇ ಸಮಾಧಿ ಮಾಡಲಾಗುವುದು’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತು, ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್–ಕರ್ನಾಟಕ’ (ಪಿಯುಸಿಎಲ್) ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಚಿಕ್ಕಬಳ್ಳಾಪುರದ ಇ.ಶುಜಾಯುತ್ ಉಲ್ಲಾ ಮತ್ತು ಬೆಂಗಳೂರಿನ ಮಧುಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ವಕೀಲ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಇಂತಹ ಪ್ರಕರಣಗಳಲ್ಲಿ ಮೃತದೇಹವನ್ನು ಸುಡುವುದಿಲ್ಲ. ಮುಂದಿನ ತನಿಖೆಗೆ ಅನುಕೂಲವಾಗುವಂತೆ ಸಮಾಧಿ ಮಾಡಲಾಗುವುದು’ ಎಂದು ತಿಳಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಂಪೂರ್ಣ ವಿವರ ಒದಗಿಸಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
PILನಲ್ಲಿ ಪೊಲೀಸರು ತಾವೇ ಸ್ವತಃ ನ್ಯಾಯಾಧೀಶರಾಗಿ, ಈ ರೀತಿ ನ್ಯಾಯ ದಂಡನೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ, ಬಾಲಕಿ ಮತ್ತು ಎನ್ಕೌಂಟರ್ಗೆ ಗುರಿಯಾಗಿರುವ ವ್ಯಕ್ತಿಯ ಮೃತದೇಹಗಳನ್ನು ಸಂರಕ್ಷಿಸಿ ಇರಿಸಬೇಕು. ಶವಪರೀಕ್ಷೆಗಾಗಿ ದೆಹಲಿ ಅಥವಾ ಕರ್ನಾಟಕ ಹೊರತುಪಡಿಸಿದ ಅನ್ಯ ರಾಜ್ಯಗಳ ಶಸ್ತ್ರಚಿಕಿತ್ಸಕರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಸ್ವತಂತ್ರವಾದ ವಿಶೇಷ ತನಿಖಾ ತಂಡ ರಚನೆ ಮಾಡಬೇಕು. ಈ ತನಿಖಾ ತಂಡವು ಕೋರ್ಟ್ ನಿಗಾದಲ್ಲಿ ಇರುವಂತೆ ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…