ಜನ ಮನದ ನಾಡಿ ಮಿಡಿತ

Advertisement

ವಿದ್ಯುತ್ ತಂತಿ ಸ್ಪರ್ಶ; ರಸ್ತೆ ಬದಿಯ ಮರಕ್ಕೆ ಬೆಂಕಿ, ತಪ್ಪಿದ ಅನಾಹುತ

ಮೂಡಿಗೆರೆ: ವಿದ್ಯುತ್ ತಂತಿಯೊಂದು ರಸ್ತೆ ಬದಿ ಒಣಗಿ ನಿಂತಿದ್ದ ಮರಕ್ಕೆ ತಗುಲಿ ಬೆಂಕಿ ಹತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿ ಓಣಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಾದ ಈ ಮಾರ್ಗವಾಗಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಮುಖಾಂತರ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸಕ್ಕೆ ಹೋಗುವ ಸಾವಿರಾರು ವಾಹನಗಳು ನಿತ್ಯ ಓಡಾಡುತ್ತವೆ. ಅದೃಷ್ಟವಶಾತ್ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ನವೀನ್ ಎಂಬವರು ಮರ ಹೊತ್ತಿ ಉರಿಯುವುದನ್ನು ಕಂಡು ಕೂಡಲೇ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ದೊಡ್ಡದಾಗಿ ಸಂಭವಿಸಬಹುದಾಗಿದ್ದ ಈ ಅನಾಹುತ ಕ್ಷಣಾರ್ಧದಲ್ಲಿ ತಪ್ಪಿದೆ. ಅಕಸ್ಮಾತ್, ಮರ ಹೊತ್ತಿ ಉರಿದ ಬಳಿಕ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ತುಂಡಾದ ವಿದ್ಯುತ್ ತಂತಿ ರಸ್ತೆಯಲ್ಲಿ ಸಂಚರಿಸುವ ಯಾವುದಾದರೂ ವಾಹನದ ಮೇಲೆ ಬಿದ್ದಿದ್ದರೆ ವಾಹನ ಕೂಡ ವಿದ್ಯುತ್ ತಂತಿಯಿಂದ ಹೊತ್ತಿ ಉರಿಯುವ ಸಾಧ್ಯತೆ ಇತ್ತು. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ವಿದ್ಯುತ್ ತಂತಿಗೆ ಅಡ್ಡ ಇರುವ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!