ಜನ ಮನದ ನಾಡಿ ಮಿಡಿತ

Advertisement

ವಿದ್ಯುತ್ ತಂತಿ ಸ್ಪರ್ಶ; ರಸ್ತೆ ಬದಿಯ ಮರಕ್ಕೆ ಬೆಂಕಿ, ತಪ್ಪಿದ ಅನಾಹುತ

ಮೂಡಿಗೆರೆ: ವಿದ್ಯುತ್ ತಂತಿಯೊಂದು ರಸ್ತೆ ಬದಿ ಒಣಗಿ ನಿಂತಿದ್ದ ಮರಕ್ಕೆ ತಗುಲಿ ಬೆಂಕಿ ಹತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿ ಓಣಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಾದ ಈ ಮಾರ್ಗವಾಗಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಮುಖಾಂತರ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸಕ್ಕೆ ಹೋಗುವ ಸಾವಿರಾರು ವಾಹನಗಳು ನಿತ್ಯ ಓಡಾಡುತ್ತವೆ. ಅದೃಷ್ಟವಶಾತ್ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ನವೀನ್ ಎಂಬವರು ಮರ ಹೊತ್ತಿ ಉರಿಯುವುದನ್ನು ಕಂಡು ಕೂಡಲೇ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ದೊಡ್ಡದಾಗಿ ಸಂಭವಿಸಬಹುದಾಗಿದ್ದ ಈ ಅನಾಹುತ ಕ್ಷಣಾರ್ಧದಲ್ಲಿ ತಪ್ಪಿದೆ. ಅಕಸ್ಮಾತ್, ಮರ ಹೊತ್ತಿ ಉರಿದ ಬಳಿಕ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ತುಂಡಾದ ವಿದ್ಯುತ್ ತಂತಿ ರಸ್ತೆಯಲ್ಲಿ ಸಂಚರಿಸುವ ಯಾವುದಾದರೂ ವಾಹನದ ಮೇಲೆ ಬಿದ್ದಿದ್ದರೆ ವಾಹನ ಕೂಡ ವಿದ್ಯುತ್ ತಂತಿಯಿಂದ ಹೊತ್ತಿ ಉರಿಯುವ ಸಾಧ್ಯತೆ ಇತ್ತು. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ವಿದ್ಯುತ್ ತಂತಿಗೆ ಅಡ್ಡ ಇರುವ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!