ಮೂಡಿಗೆರೆ: ವಿದ್ಯುತ್ ತಂತಿಯೊಂದು ರಸ್ತೆ ಬದಿ ಒಣಗಿ ನಿಂತಿದ್ದ ಮರಕ್ಕೆ ತಗುಲಿ ಬೆಂಕಿ ಹತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿ ಓಣಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಾದ ಈ ಮಾರ್ಗವಾಗಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಮುಖಾಂತರ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸಕ್ಕೆ ಹೋಗುವ ಸಾವಿರಾರು ವಾಹನಗಳು ನಿತ್ಯ ಓಡಾಡುತ್ತವೆ. ಅದೃಷ್ಟವಶಾತ್ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ನವೀನ್ ಎಂಬವರು ಮರ ಹೊತ್ತಿ ಉರಿಯುವುದನ್ನು ಕಂಡು ಕೂಡಲೇ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ದೊಡ್ಡದಾಗಿ ಸಂಭವಿಸಬಹುದಾಗಿದ್ದ ಈ ಅನಾಹುತ ಕ್ಷಣಾರ್ಧದಲ್ಲಿ ತಪ್ಪಿದೆ. ಅಕಸ್ಮಾತ್, ಮರ ಹೊತ್ತಿ ಉರಿದ ಬಳಿಕ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ತುಂಡಾದ ವಿದ್ಯುತ್ ತಂತಿ ರಸ್ತೆಯಲ್ಲಿ ಸಂಚರಿಸುವ ಯಾವುದಾದರೂ ವಾಹನದ ಮೇಲೆ ಬಿದ್ದಿದ್ದರೆ ವಾಹನ ಕೂಡ ವಿದ್ಯುತ್ ತಂತಿಯಿಂದ ಹೊತ್ತಿ ಉರಿಯುವ ಸಾಧ್ಯತೆ ಇತ್ತು. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ವಿದ್ಯುತ್ ತಂತಿಗೆ ಅಡ್ಡ ಇರುವ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…