ಮೂಡಿಗೆರೆ: ವಿದ್ಯುತ್ ತಂತಿಯೊಂದು ರಸ್ತೆ ಬದಿ ಒಣಗಿ ನಿಂತಿದ್ದ ಮರಕ್ಕೆ ತಗುಲಿ ಬೆಂಕಿ ಹತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿ ಓಣಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಾದ ಈ ಮಾರ್ಗವಾಗಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಮುಖಾಂತರ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸಕ್ಕೆ ಹೋಗುವ ಸಾವಿರಾರು ವಾಹನಗಳು ನಿತ್ಯ ಓಡಾಡುತ್ತವೆ. ಅದೃಷ್ಟವಶಾತ್ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ನವೀನ್ ಎಂಬವರು ಮರ ಹೊತ್ತಿ ಉರಿಯುವುದನ್ನು ಕಂಡು ಕೂಡಲೇ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ದೊಡ್ಡದಾಗಿ ಸಂಭವಿಸಬಹುದಾಗಿದ್ದ ಈ ಅನಾಹುತ ಕ್ಷಣಾರ್ಧದಲ್ಲಿ ತಪ್ಪಿದೆ. ಅಕಸ್ಮಾತ್, ಮರ ಹೊತ್ತಿ ಉರಿದ ಬಳಿಕ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ತುಂಡಾದ ವಿದ್ಯುತ್ ತಂತಿ ರಸ್ತೆಯಲ್ಲಿ ಸಂಚರಿಸುವ ಯಾವುದಾದರೂ ವಾಹನದ ಮೇಲೆ ಬಿದ್ದಿದ್ದರೆ ವಾಹನ ಕೂಡ ವಿದ್ಯುತ್ ತಂತಿಯಿಂದ ಹೊತ್ತಿ ಉರಿಯುವ ಸಾಧ್ಯತೆ ಇತ್ತು. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ವಿದ್ಯುತ್ ತಂತಿಗೆ ಅಡ್ಡ ಇರುವ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…