ಏಪ್ರಿಲ್ 24 ರಂದು ಮಧ್ಯಾಹ್ನ 12.17 ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ಅಥವಾ ಲಹೈನಾ ನೂನ್ ಎಂದು ಕರೆಯಲ್ಪಡುವ ಆಕರ್ಷಕ ಘಟನೆ ನಡೆಯಲಿದೆ. ಈ ಅಪರೂಪದ ಕ್ಷಣದಲ್ಲಿ ಸೂರ್ಯನು ನೇರವಾಗಿ ತಲೆಯ ಮೇಲೆ ಇರುತ್ತಾನೆ, ಇದರಿಂದಾಗಿ ನಿಮ್ಮ ನೆರಳು ನಿಮಗೆ ಕಾಣಲ್ಲ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ವಿಜ್ಞಾನಿಗಳು ದೃಢಪಡಿಸಿದ್ದಾರೆ.
IIA ನಲ್ಲಿ ವಿಜ್ಞಾನ ಸಂವಹನ, ಸಾರ್ವಜನಿಕ ಸಂಪರ್ಕ ಮತ್ತು ಶಿಕ್ಷಣ ವಿಭಾಗದ ನೇತೃತ್ವ ವಹಿಸಿರುವ ಡಾ. ನಿರುಜ್ ಮೋಹನ್ ರಾಮಾನುಜಂ, ಸೂರ್ಯನು ಆಕಾಶದಲ್ಲಿ ತನ್ನ ಅತ್ಯುನ್ನತ ಬಿಂದುವನ್ನು ತಲುಪಿದಾಗ ಈ ವಿದ್ಯಮಾನ ಸಂಭವಿಸುತ್ತದೆ. ಪರಿಣಾಮವಾಗಿ, ನೆರಳುಗಳು ನೇರವಾಗಿ ವಸ್ತುಗಳ ಕೆಳಗೆ ಬೀಳುತ್ತವೆ ಮತ್ತು ಮಾನವ ಕಣ್ಣಿಗೆ ಅಗೋಚರವಾಗಿರುತ್ತವೆ ಎಂದು ವಿವರಿಸಿದ್ದಾರೆ.
ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ಪ್ರಕಾರ, +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಎಲ್ಲಾ ಸ್ಥಳಗಳಿಗೆ ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ. ಶೂನ್ಯ ನೆರಳು ದಿನವು ಬೆಂಗಳೂರಿಗೆ ಬೆಂಗಳೂರಿಗೆ ಮಾತ್ರವಲ್ಲದೆ, ಇದು ಚೆನ್ನೈ ಮತ್ತು ಮಂಗಳೂರಿನಂತಹ ಸ್ಥಳಗಳನ್ನು ಒಳಗೊಂಡಂತೆ ಸಮಭಾಜಕ ವೃತ್ತ ಮತ್ತು ಕರ್ಕಾಟಕ ವೃತ್ತದ ನಡುವೆ ಇರುವ ಎಲ್ಲಾ ನಗರಗಳಲ್ಲಿ ನಡೆಯುತ್ತದೆ. ರಾಜ್ಯದಲ್ಲಿ, ಈ ವಿದ್ಯಮಾನವು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…