ಏಪ್ರಿಲ್ 24 ರಂದು ಮಧ್ಯಾಹ್ನ 12.17 ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ಅಥವಾ ಲಹೈನಾ ನೂನ್ ಎಂದು ಕರೆಯಲ್ಪಡುವ ಆಕರ್ಷಕ ಘಟನೆ ನಡೆಯಲಿದೆ. ಈ ಅಪರೂಪದ ಕ್ಷಣದಲ್ಲಿ ಸೂರ್ಯನು ನೇರವಾಗಿ ತಲೆಯ ಮೇಲೆ ಇರುತ್ತಾನೆ, ಇದರಿಂದಾಗಿ ನಿಮ್ಮ ನೆರಳು ನಿಮಗೆ ಕಾಣಲ್ಲ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ವಿಜ್ಞಾನಿಗಳು ದೃಢಪಡಿಸಿದ್ದಾರೆ.
IIA ನಲ್ಲಿ ವಿಜ್ಞಾನ ಸಂವಹನ, ಸಾರ್ವಜನಿಕ ಸಂಪರ್ಕ ಮತ್ತು ಶಿಕ್ಷಣ ವಿಭಾಗದ ನೇತೃತ್ವ ವಹಿಸಿರುವ ಡಾ. ನಿರುಜ್ ಮೋಹನ್ ರಾಮಾನುಜಂ, ಸೂರ್ಯನು ಆಕಾಶದಲ್ಲಿ ತನ್ನ ಅತ್ಯುನ್ನತ ಬಿಂದುವನ್ನು ತಲುಪಿದಾಗ ಈ ವಿದ್ಯಮಾನ ಸಂಭವಿಸುತ್ತದೆ. ಪರಿಣಾಮವಾಗಿ, ನೆರಳುಗಳು ನೇರವಾಗಿ ವಸ್ತುಗಳ ಕೆಳಗೆ ಬೀಳುತ್ತವೆ ಮತ್ತು ಮಾನವ ಕಣ್ಣಿಗೆ ಅಗೋಚರವಾಗಿರುತ್ತವೆ ಎಂದು ವಿವರಿಸಿದ್ದಾರೆ.
ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ಪ್ರಕಾರ, +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಎಲ್ಲಾ ಸ್ಥಳಗಳಿಗೆ ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ. ಶೂನ್ಯ ನೆರಳು ದಿನವು ಬೆಂಗಳೂರಿಗೆ ಬೆಂಗಳೂರಿಗೆ ಮಾತ್ರವಲ್ಲದೆ, ಇದು ಚೆನ್ನೈ ಮತ್ತು ಮಂಗಳೂರಿನಂತಹ ಸ್ಥಳಗಳನ್ನು ಒಳಗೊಂಡಂತೆ ಸಮಭಾಜಕ ವೃತ್ತ ಮತ್ತು ಕರ್ಕಾಟಕ ವೃತ್ತದ ನಡುವೆ ಇರುವ ಎಲ್ಲಾ ನಗರಗಳಲ್ಲಿ ನಡೆಯುತ್ತದೆ. ರಾಜ್ಯದಲ್ಲಿ, ಈ ವಿದ್ಯಮಾನವು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…