ಜನ ಮನದ ನಾಡಿ ಮಿಡಿತ

Advertisement

ಮಹಾರಾಷ್ಟ್ರ : ಕಸದ ಬುಟ್ಟಿಯಲ್ಲಿ ಸಿಕ್ಕಿದ್ದ ಅಂಧ ಮಗು ಈಗ ಅಸಿಸ್ಟಂಟ್ ಕಲೆಕ್ಟರ್

25 ವರ್ಷಗಳ ಹಿಂದೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಅಂಧ ಮಗುವೊಂದು ಕಸದ ಬುಟ್ಟಿಯಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಮಗುವನ್ನು ರಕ್ಷಿಸಿ ಸುಧಾರಣಾ ಗೃಹಕ್ಕೆ ಕರೆದ್ಯೊಯಿದಿದ್ದಾರೆ. ಈಗ ಇದೇ ಮಗು ಬೆಳೆದು ದೊಡ್ಡವಳಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಮಾಜದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಇವರಿಗೆ ನೇಮಕಾತಿ ಪತ್ರವೂ ಸಿಕ್ಕಿದೆ.

ಆ ಯುವತಿಯ ಹೆಸರೇ ಮಾಲಾ ಪಾಪಲ್ಕರ್. ಮಾಲಾ ನಾಗ್ಪುರ ಕಲೆಕ್ಟರೇಟ್‌ನಲ್ಲಿ ತನ್ನ ಮೊದಲ ಹುದ್ದೆಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಕ್ಲರ್ಕ್-ಕಮ್-ಟೈಪಿಸ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಮಾಲಾ ಪಾಪಲ್ಕರ್ ಸುದ್ದಿಯಾಗಿದ್ದರು. ಮೂರು ದಿನಗಳ ಹಿಂದೆ, 26 ವರ್ಷದ ಮಾಲಾ ಅವರಿಗೆ ನಾಗ್ಪುರ ಕಲೆಕ್ಟರೇಟ್‌ನಲ್ಲಿ ಕಂದಾಯ ಸಹಾಯಕಿಯಾಗಿ ನೇಮಕಗೊಂಡಿರುವ ಬಗ್ಗೆ ಮಾಹಿತಿ ನೀಡುವ ಪತ್ರ ಬಂದಿದೆ. ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಮುಂದಿನ 8-10 ದಿನಗಳಲ್ಲಿ ಮಾಲಾ ಕೆಲಸಕ್ಕೆ ವರದಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಮಾಲಾ ಹುಟ್ಟಿನಿಂದಲೇ ಕುರುಡಳಾಗಿದ್ದರೂ, ಅನಾಥಾಶ್ರಮದ ಬೆಂಬಲ ಮತ್ತು ದೃಷ್ಟಿಹೀನ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣದ ಪ್ರವೇಶದೊಂದಿಗೆ, ಅವರು ತಮ್ಮ ಅಧ್ಯಯನವನ್ನು ಮುಂದುವರೆಸಿದ್ದಾರೆ. ಮಾಲಾ ಅವರ ಹೋರಾಟದ ಕಥೆ ಮಹಾರಾಷ್ಟ್ರಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!