25 ವರ್ಷಗಳ ಹಿಂದೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಅಂಧ ಮಗುವೊಂದು ಕಸದ ಬುಟ್ಟಿಯಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಮಗುವನ್ನು ರಕ್ಷಿಸಿ ಸುಧಾರಣಾ ಗೃಹಕ್ಕೆ ಕರೆದ್ಯೊಯಿದಿದ್ದಾರೆ. ಈಗ ಇದೇ ಮಗು ಬೆಳೆದು ದೊಡ್ಡವಳಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಮಾಜದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಇವರಿಗೆ ನೇಮಕಾತಿ ಪತ್ರವೂ ಸಿಕ್ಕಿದೆ.
ಆ ಯುವತಿಯ ಹೆಸರೇ ಮಾಲಾ ಪಾಪಲ್ಕರ್. ಮಾಲಾ ನಾಗ್ಪುರ ಕಲೆಕ್ಟರೇಟ್ನಲ್ಲಿ ತನ್ನ ಮೊದಲ ಹುದ್ದೆಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಕ್ಲರ್ಕ್-ಕಮ್-ಟೈಪಿಸ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಮಾಲಾ ಪಾಪಲ್ಕರ್ ಸುದ್ದಿಯಾಗಿದ್ದರು. ಮೂರು ದಿನಗಳ ಹಿಂದೆ, 26 ವರ್ಷದ ಮಾಲಾ ಅವರಿಗೆ ನಾಗ್ಪುರ ಕಲೆಕ್ಟರೇಟ್ನಲ್ಲಿ ಕಂದಾಯ ಸಹಾಯಕಿಯಾಗಿ ನೇಮಕಗೊಂಡಿರುವ ಬಗ್ಗೆ ಮಾಹಿತಿ ನೀಡುವ ಪತ್ರ ಬಂದಿದೆ. ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಮುಂದಿನ 8-10 ದಿನಗಳಲ್ಲಿ ಮಾಲಾ ಕೆಲಸಕ್ಕೆ ವರದಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಮಾಲಾ ಹುಟ್ಟಿನಿಂದಲೇ ಕುರುಡಳಾಗಿದ್ದರೂ, ಅನಾಥಾಶ್ರಮದ ಬೆಂಬಲ ಮತ್ತು ದೃಷ್ಟಿಹೀನ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣದ ಪ್ರವೇಶದೊಂದಿಗೆ, ಅವರು ತಮ್ಮ ಅಧ್ಯಯನವನ್ನು ಮುಂದುವರೆಸಿದ್ದಾರೆ. ಮಾಲಾ ಅವರ ಹೋರಾಟದ ಕಥೆ ಮಹಾರಾಷ್ಟ್ರಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…