25 ವರ್ಷಗಳ ಹಿಂದೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಅಂಧ ಮಗುವೊಂದು ಕಸದ ಬುಟ್ಟಿಯಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಮಗುವನ್ನು ರಕ್ಷಿಸಿ ಸುಧಾರಣಾ ಗೃಹಕ್ಕೆ ಕರೆದ್ಯೊಯಿದಿದ್ದಾರೆ. ಈಗ ಇದೇ ಮಗು ಬೆಳೆದು ದೊಡ್ಡವಳಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಮಾಜದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಇವರಿಗೆ ನೇಮಕಾತಿ ಪತ್ರವೂ ಸಿಕ್ಕಿದೆ.
ಆ ಯುವತಿಯ ಹೆಸರೇ ಮಾಲಾ ಪಾಪಲ್ಕರ್. ಮಾಲಾ ನಾಗ್ಪುರ ಕಲೆಕ್ಟರೇಟ್ನಲ್ಲಿ ತನ್ನ ಮೊದಲ ಹುದ್ದೆಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಕ್ಲರ್ಕ್-ಕಮ್-ಟೈಪಿಸ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಮಾಲಾ ಪಾಪಲ್ಕರ್ ಸುದ್ದಿಯಾಗಿದ್ದರು. ಮೂರು ದಿನಗಳ ಹಿಂದೆ, 26 ವರ್ಷದ ಮಾಲಾ ಅವರಿಗೆ ನಾಗ್ಪುರ ಕಲೆಕ್ಟರೇಟ್ನಲ್ಲಿ ಕಂದಾಯ ಸಹಾಯಕಿಯಾಗಿ ನೇಮಕಗೊಂಡಿರುವ ಬಗ್ಗೆ ಮಾಹಿತಿ ನೀಡುವ ಪತ್ರ ಬಂದಿದೆ. ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಮುಂದಿನ 8-10 ದಿನಗಳಲ್ಲಿ ಮಾಲಾ ಕೆಲಸಕ್ಕೆ ವರದಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಮಾಲಾ ಹುಟ್ಟಿನಿಂದಲೇ ಕುರುಡಳಾಗಿದ್ದರೂ, ಅನಾಥಾಶ್ರಮದ ಬೆಂಬಲ ಮತ್ತು ದೃಷ್ಟಿಹೀನ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣದ ಪ್ರವೇಶದೊಂದಿಗೆ, ಅವರು ತಮ್ಮ ಅಧ್ಯಯನವನ್ನು ಮುಂದುವರೆಸಿದ್ದಾರೆ. ಮಾಲಾ ಅವರ ಹೋರಾಟದ ಕಥೆ ಮಹಾರಾಷ್ಟ್ರಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದೆ.
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…