ಜನ ಮನದ ನಾಡಿ ಮಿಡಿತ

Advertisement

ಮದ್ಯ ವ್ಯಸನಿ ಮಗನ ಕಾಟಕ್ಕೆ ರೋಸಿ ಹೋದ ತಾಯಿ ಬೆಂಕಿ ಹಚ್ಚಿ ಕೊಲೆ

ಬೆಂಗಳೂರು: ಮದ್ಯಪಾನ ಚಟಕ್ಕೆ ದಾಸನಾಗಿದ್ದ ಮಗನನ್ನ ತಾಯಿಯೊಬ್ಬಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ‌ಯಲ್ಲಿ ಸೋಮವಾರ ನಡೆದಿದೆ. ಚಾಂದ್ ಭಾಷಾ ಕೊಲೆಯಾದ ವ್ಯಕ್ತಿ ಆತನ ತಾಯಿ ಸೋಫಿಯಾಳನನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ. ಸೋಮವಾರ ಕುಡಿದುಕೊಂಡು ಬಂದು ತಾಯಿ ಜೊತೆ ಗಲಾಟೆ ಮಾಡಿದ್ದನು. ಬಳಿಕ ಸಂಜೆ 4:45ರ ಸುಮಾರಿಗೆ ಮತ್ತೆ ಕಂಠಪೂರ್ತಿ ಕುಡಿದು ಬಂದು ಮನೆಯ ಹೊರಗಡೆ ಕುಳಿತಿದ್ದ.

ಸಿಟ್ಟಿಗೆದ್ದ ಆತನ ತಾಯಿ ಅವನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವುದಾಗಿ ಭಯಪಡಿಸಲು ಯತ್ನಿಸಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದಾಗ ಬೆಂಕಿ ಹಚ್ಚಿದ್ದಾಳೆ. ಪರಿಣಾಮ ಚಾಂದ್ ಪಾಷಾ ಸ್ಥಳದಲ್ಲೇ ಸುಟ್ಟು ಸಾವನ್ನಪ್ಪಿದ್ದಾನೆ. ಸದ್ಯ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ ಸೋಫಿಯಾಳನ್ನು ಬಂಧಿಸಿರುವುದಾಗಿ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!