ಬೆಂಗಳೂರು: ಮದ್ಯಪಾನ ಚಟಕ್ಕೆ ದಾಸನಾಗಿದ್ದ ಮಗನನ್ನ ತಾಯಿಯೊಬ್ಬಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಚಾಂದ್ ಭಾಷಾ ಕೊಲೆಯಾದ ವ್ಯಕ್ತಿ ಆತನ ತಾಯಿ ಸೋಫಿಯಾಳನನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ. ಸೋಮವಾರ ಕುಡಿದುಕೊಂಡು ಬಂದು ತಾಯಿ ಜೊತೆ ಗಲಾಟೆ ಮಾಡಿದ್ದನು. ಬಳಿಕ ಸಂಜೆ 4:45ರ ಸುಮಾರಿಗೆ ಮತ್ತೆ ಕಂಠಪೂರ್ತಿ ಕುಡಿದು ಬಂದು ಮನೆಯ ಹೊರಗಡೆ ಕುಳಿತಿದ್ದ.
ಸಿಟ್ಟಿಗೆದ್ದ ಆತನ ತಾಯಿ ಅವನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವುದಾಗಿ ಭಯಪಡಿಸಲು ಯತ್ನಿಸಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದಾಗ ಬೆಂಕಿ ಹಚ್ಚಿದ್ದಾಳೆ. ಪರಿಣಾಮ ಚಾಂದ್ ಪಾಷಾ ಸ್ಥಳದಲ್ಲೇ ಸುಟ್ಟು ಸಾವನ್ನಪ್ಪಿದ್ದಾನೆ. ಸದ್ಯ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ ಸೋಫಿಯಾಳನ್ನು ಬಂಧಿಸಿರುವುದಾಗಿ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…