ಬೆಂಗಳೂರು: ಮದ್ಯಪಾನ ಚಟಕ್ಕೆ ದಾಸನಾಗಿದ್ದ ಮಗನನ್ನ ತಾಯಿಯೊಬ್ಬಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಚಾಂದ್ ಭಾಷಾ ಕೊಲೆಯಾದ ವ್ಯಕ್ತಿ ಆತನ ತಾಯಿ ಸೋಫಿಯಾಳನನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ. ಸೋಮವಾರ ಕುಡಿದುಕೊಂಡು ಬಂದು ತಾಯಿ ಜೊತೆ ಗಲಾಟೆ ಮಾಡಿದ್ದನು. ಬಳಿಕ ಸಂಜೆ 4:45ರ ಸುಮಾರಿಗೆ ಮತ್ತೆ ಕಂಠಪೂರ್ತಿ ಕುಡಿದು ಬಂದು ಮನೆಯ ಹೊರಗಡೆ ಕುಳಿತಿದ್ದ.
ಸಿಟ್ಟಿಗೆದ್ದ ಆತನ ತಾಯಿ ಅವನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವುದಾಗಿ ಭಯಪಡಿಸಲು ಯತ್ನಿಸಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದಾಗ ಬೆಂಕಿ ಹಚ್ಚಿದ್ದಾಳೆ. ಪರಿಣಾಮ ಚಾಂದ್ ಪಾಷಾ ಸ್ಥಳದಲ್ಲೇ ಸುಟ್ಟು ಸಾವನ್ನಪ್ಪಿದ್ದಾನೆ. ಸದ್ಯ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ ಸೋಫಿಯಾಳನ್ನು ಬಂಧಿಸಿರುವುದಾಗಿ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…