ಬೆಂಗಳೂರು: ಮದ್ಯಪಾನ ಚಟಕ್ಕೆ ದಾಸನಾಗಿದ್ದ ಮಗನನ್ನ ತಾಯಿಯೊಬ್ಬಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಚಾಂದ್ ಭಾಷಾ ಕೊಲೆಯಾದ ವ್ಯಕ್ತಿ ಆತನ ತಾಯಿ ಸೋಫಿಯಾಳನನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ. ಸೋಮವಾರ ಕುಡಿದುಕೊಂಡು ಬಂದು ತಾಯಿ ಜೊತೆ ಗಲಾಟೆ ಮಾಡಿದ್ದನು. ಬಳಿಕ ಸಂಜೆ 4:45ರ ಸುಮಾರಿಗೆ ಮತ್ತೆ ಕಂಠಪೂರ್ತಿ ಕುಡಿದು ಬಂದು ಮನೆಯ ಹೊರಗಡೆ ಕುಳಿತಿದ್ದ.
ಸಿಟ್ಟಿಗೆದ್ದ ಆತನ ತಾಯಿ ಅವನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವುದಾಗಿ ಭಯಪಡಿಸಲು ಯತ್ನಿಸಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದಾಗ ಬೆಂಕಿ ಹಚ್ಚಿದ್ದಾಳೆ. ಪರಿಣಾಮ ಚಾಂದ್ ಪಾಷಾ ಸ್ಥಳದಲ್ಲೇ ಸುಟ್ಟು ಸಾವನ್ನಪ್ಪಿದ್ದಾನೆ. ಸದ್ಯ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ ಸೋಫಿಯಾಳನ್ನು ಬಂಧಿಸಿರುವುದಾಗಿ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…