ಜನ ಮನದ ನಾಡಿ ಮಿಡಿತ

Advertisement

ಜಮ್ಮು: ಪ್ರವಾಹಕ್ಕೆ ಮೂವರು ಬಲಿ; ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯಲ್ಲಿ ಮೇಘಸ್ಫೋಟದ ಪರಿಣಾಮ ಭಾನುವಾರ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.

ಶನಿವಾರವೂ ಸಿಡಿಲು ಬಡಿದು ಓರ್ವ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿದ್ದು, ಕಳೆದೆರಡು ದಿನದಲ್ಲಿ ಜಮ್ಮುವಿನಲ್ಲಿ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಮೇಘಸ್ಫೋಟದೊಂದಿಗೆ ವೇಗವಾಗಿ ಬೀಸುವ ಗಾಳಿ, ಭೂಕುಸಿತ, ಆಲಿಕಲ್ಲು ಮಳೆಯೂ ಸಂಭವಿಸಿದ್ದು, ಧರಂ ಕುಂಡ್‌ ಗ್ರಾಮದಲ್ಲಿ 10 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ. 40ಕ್ಕೂ ಅಧಿಕ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಲವು ವಾಹನಗಳೂ ಕೊಚ್ಚಿಕೊಂಡು ಹೋಗಿವೆ. ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದು, 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ.

ಜಮ್ಮು-ಶ್ರೀನಗರ ನಡುವಿನ 250 ಕಿ.ಮೀ ಉದ್ದದ ಸರ್ವಋತು ರಾಷ್ಟ್ರೀಯ ಹೆದ್ದಾರಿಯ ಬಳಿ ಹಲವು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಬಂಡೆಗಳು ಉರುಳುತ್ತಿವೆ. ಆದಕಾರಣ, ಪರಿಸ್ಥಿತಿ ಸುಧಾರಿಸುವ ತನಕ ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!