ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಮೃತರನ್ನು ತೋಕೂರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.
ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದಿದ್ದು, ಈ ಸಂದರ್ಭದಲ್ಲಿ ಸವಾರನೂ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಸರಕು ತುಂಬಿದ ಲಾರಿ ರಸ್ತೆಯಲ್ಲಿ ಬಿದ್ದಿದ್ದ ಸ್ಕೂಟರ್ ಮತ್ತು ಸವಾರನ ಮೇಲೆ ಚಲಿಸಿದೆ. ಇದರಿಂದ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್ ಮತ್ತು ಸವಾರ ಟೈಟಸ್ ಅವರನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಮಂಗಳೂರಿನ ಹೆದ್ದಾರಿಗಳಲ್ಲಿ ಇಂತಹ ಹೊಂಡಗಳು ತುಂಬಿದ್ದು ಸವಾರರು ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸುವ ಪರಿಸ್ಥಿತಿ ಉಂಟಾಗಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…