ಜನ ಮನದ ನಾಡಿ ಮಿಡಿತ

Advertisement

ಗ್ವಾಲಿಯರ್ : 3 ವರ್ಷದ ಮಗು ಮೇಲೆ ಮನೆ ಮಾಲೀಕನ ಮಗನಿಂದ ಅತ್ಯಾಚಾರ

ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಇಬ್ಬರೂ ಚಾಕೊಲೇಟ್​ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆಸೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಘಟನೆ ಗ್ವಾಲಿಯರ್‌ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ನಡೆದಿದೆ.

ಆರೋಪಿಗಳಲ್ಲಿ ಒಬ್ಬ ಮನೆ ಮಾಲೀಕನ ಮಗ, ಮಾಹಿತಿ ಪ್ರಕಾರ ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್​ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಆ ಮಗುವಿನ ಬಳಿ ಮನೆಯಲ್ಲಿ ಯಾರಿಗೂ ಏನೂ ಹೇಳಬೇಡ ಎಂದು ಹೇಳಿ ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಆದರೆ, ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದ್ದಾಳೆ. ನಂತರ ಆಕೆಯ ಪೋಷಕರು ನೇರವಾಗಿ ದಾಬ್ರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಎಸ್‌ಡಿಒಪಿ ದಬ್ರಾ ಜಿತೇಂದ್ರ ನಾಗೈಚ್, ಸಿಎಸ್‌ಪಿ ಕಿರಣ್ ಅಹಿರ್ವಾರ್ ಮತ್ತು ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಬಲ್ವಿಂದರ್ ಧಿಲ್ಲೋನ್ ಸ್ಥಳಕ್ಕೆ ಭೇಟಿ ನೀಡಿದ್ದು, ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ನಿರಂಜನ್ ಶರ್ಮಾ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ .

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!