ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಇಬ್ಬರೂ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆಸೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಘಟನೆ ಗ್ವಾಲಿಯರ್ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ನಡೆದಿದೆ.
ಆರೋಪಿಗಳಲ್ಲಿ ಒಬ್ಬ ಮನೆ ಮಾಲೀಕನ ಮಗ, ಮಾಹಿತಿ ಪ್ರಕಾರ ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಆ ಮಗುವಿನ ಬಳಿ ಮನೆಯಲ್ಲಿ ಯಾರಿಗೂ ಏನೂ ಹೇಳಬೇಡ ಎಂದು ಹೇಳಿ ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಆದರೆ, ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದ್ದಾಳೆ. ನಂತರ ಆಕೆಯ ಪೋಷಕರು ನೇರವಾಗಿ ದಾಬ್ರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಎಸ್ಡಿಒಪಿ ದಬ್ರಾ ಜಿತೇಂದ್ರ ನಾಗೈಚ್, ಸಿಎಸ್ಪಿ ಕಿರಣ್ ಅಹಿರ್ವಾರ್ ಮತ್ತು ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಬಲ್ವಿಂದರ್ ಧಿಲ್ಲೋನ್ ಸ್ಥಳಕ್ಕೆ ಭೇಟಿ ನೀಡಿದ್ದು, ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ನಿರಂಜನ್ ಶರ್ಮಾ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ .
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…