ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಇಬ್ಬರೂ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆಸೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಘಟನೆ ಗ್ವಾಲಿಯರ್ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ನಡೆದಿದೆ.
ಆರೋಪಿಗಳಲ್ಲಿ ಒಬ್ಬ ಮನೆ ಮಾಲೀಕನ ಮಗ, ಮಾಹಿತಿ ಪ್ರಕಾರ ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಆ ಮಗುವಿನ ಬಳಿ ಮನೆಯಲ್ಲಿ ಯಾರಿಗೂ ಏನೂ ಹೇಳಬೇಡ ಎಂದು ಹೇಳಿ ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಆದರೆ, ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದ್ದಾಳೆ. ನಂತರ ಆಕೆಯ ಪೋಷಕರು ನೇರವಾಗಿ ದಾಬ್ರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಎಸ್ಡಿಒಪಿ ದಬ್ರಾ ಜಿತೇಂದ್ರ ನಾಗೈಚ್, ಸಿಎಸ್ಪಿ ಕಿರಣ್ ಅಹಿರ್ವಾರ್ ಮತ್ತು ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಬಲ್ವಿಂದರ್ ಧಿಲ್ಲೋನ್ ಸ್ಥಳಕ್ಕೆ ಭೇಟಿ ನೀಡಿದ್ದು, ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ನಿರಂಜನ್ ಶರ್ಮಾ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ .
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…