ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.
ಸಿಂಧೂ ನದಿ ನೀರಿನ ಒಪ್ಪಂದ ರದ್ದು ಮಾಡುವ ಮೂಲಕ ಪಾಕಿಸ್ತಾನದ ಕೃಷಿ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಭಾರತ ಪಾಕಿಸ್ತಾನದ ವಿನಿಮಯ ಬಿಂದುವಾದ ವಾಘಾ – ಅಠಾರಿ ಬಾರ್ಡರ್ ಬಂದ್ ಮಾಡಿ ಸರ್ಕಾರ ಆದೇಶಿಸಿದ್ದು,ಇದರಿಂದಾಗಿ ಪಾಕ್ ಗೆ ಸರಕು ಸಾಗಾಟ ನಿಂತಿದ್ದು, ಅಗತ್ಯ ವಸ್ತುಗಳಿಗೆ ಕೊರತೆ ಉಂಟಾಗುವ ಭೀತಿಯಲ್ಲಿ ಪಾಕಿಸ್ತಾನ ನಡುಗುತ್ತಿದೆ. ಭಾರತದಲ್ಲಿನ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚನೆಯನ್ನು ನೀಡಿದೆ. ಭಾರತದಲ್ಲಿನ 25 ಪಾಕ್ ರಾಜತಾಂತ್ರಿಕರ ಉಚ್ಛಾಟನೆ ಮಾಡಿ ಭಾರತ ತೊರೆಯಲು ವಾರದ ಗಡುವು ನೀಡಿದೆ. ಈಗಾಗಲೇ ಪಾಕ್ ಪ್ರಜೆಗಳಿಗೆ ನೀಡಿರುವ ವೀಸಾ ರದ್ದು ಮಾಡಿದ್ದು, ಇನ್ಮುಂದೆ ಪಾಕ್ ಪ್ರಜೆಗಳಿಗೆ ಭಾರತದ ವೀಸಾ ಅವಕಾಶ ಇಲ್ಲ ಎಂದು ಘೋಷಿಸಿದೆ.
ಈ ಮೂಲಕ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮೊದಲ ಹಂತದ ಪ್ರತಿಕ್ರಿಯೆಯನ್ನು ನೀಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…