ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.
ಸಿಂಧೂ ನದಿ ನೀರಿನ ಒಪ್ಪಂದ ರದ್ದು ಮಾಡುವ ಮೂಲಕ ಪಾಕಿಸ್ತಾನದ ಕೃಷಿ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಭಾರತ ಪಾಕಿಸ್ತಾನದ ವಿನಿಮಯ ಬಿಂದುವಾದ ವಾಘಾ – ಅಠಾರಿ ಬಾರ್ಡರ್ ಬಂದ್ ಮಾಡಿ ಸರ್ಕಾರ ಆದೇಶಿಸಿದ್ದು,ಇದರಿಂದಾಗಿ ಪಾಕ್ ಗೆ ಸರಕು ಸಾಗಾಟ ನಿಂತಿದ್ದು, ಅಗತ್ಯ ವಸ್ತುಗಳಿಗೆ ಕೊರತೆ ಉಂಟಾಗುವ ಭೀತಿಯಲ್ಲಿ ಪಾಕಿಸ್ತಾನ ನಡುಗುತ್ತಿದೆ. ಭಾರತದಲ್ಲಿನ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚನೆಯನ್ನು ನೀಡಿದೆ. ಭಾರತದಲ್ಲಿನ 25 ಪಾಕ್ ರಾಜತಾಂತ್ರಿಕರ ಉಚ್ಛಾಟನೆ ಮಾಡಿ ಭಾರತ ತೊರೆಯಲು ವಾರದ ಗಡುವು ನೀಡಿದೆ. ಈಗಾಗಲೇ ಪಾಕ್ ಪ್ರಜೆಗಳಿಗೆ ನೀಡಿರುವ ವೀಸಾ ರದ್ದು ಮಾಡಿದ್ದು, ಇನ್ಮುಂದೆ ಪಾಕ್ ಪ್ರಜೆಗಳಿಗೆ ಭಾರತದ ವೀಸಾ ಅವಕಾಶ ಇಲ್ಲ ಎಂದು ಘೋಷಿಸಿದೆ.
ಈ ಮೂಲಕ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮೊದಲ ಹಂತದ ಪ್ರತಿಕ್ರಿಯೆಯನ್ನು ನೀಡಿದೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…