ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.
ಸಿಂಧೂ ನದಿ ನೀರಿನ ಒಪ್ಪಂದ ರದ್ದು ಮಾಡುವ ಮೂಲಕ ಪಾಕಿಸ್ತಾನದ ಕೃಷಿ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಭಾರತ ಪಾಕಿಸ್ತಾನದ ವಿನಿಮಯ ಬಿಂದುವಾದ ವಾಘಾ – ಅಠಾರಿ ಬಾರ್ಡರ್ ಬಂದ್ ಮಾಡಿ ಸರ್ಕಾರ ಆದೇಶಿಸಿದ್ದು,ಇದರಿಂದಾಗಿ ಪಾಕ್ ಗೆ ಸರಕು ಸಾಗಾಟ ನಿಂತಿದ್ದು, ಅಗತ್ಯ ವಸ್ತುಗಳಿಗೆ ಕೊರತೆ ಉಂಟಾಗುವ ಭೀತಿಯಲ್ಲಿ ಪಾಕಿಸ್ತಾನ ನಡುಗುತ್ತಿದೆ. ಭಾರತದಲ್ಲಿನ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚನೆಯನ್ನು ನೀಡಿದೆ. ಭಾರತದಲ್ಲಿನ 25 ಪಾಕ್ ರಾಜತಾಂತ್ರಿಕರ ಉಚ್ಛಾಟನೆ ಮಾಡಿ ಭಾರತ ತೊರೆಯಲು ವಾರದ ಗಡುವು ನೀಡಿದೆ. ಈಗಾಗಲೇ ಪಾಕ್ ಪ್ರಜೆಗಳಿಗೆ ನೀಡಿರುವ ವೀಸಾ ರದ್ದು ಮಾಡಿದ್ದು, ಇನ್ಮುಂದೆ ಪಾಕ್ ಪ್ರಜೆಗಳಿಗೆ ಭಾರತದ ವೀಸಾ ಅವಕಾಶ ಇಲ್ಲ ಎಂದು ಘೋಷಿಸಿದೆ.
ಈ ಮೂಲಕ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮೊದಲ ಹಂತದ ಪ್ರತಿಕ್ರಿಯೆಯನ್ನು ನೀಡಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…