ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ: ಸ್ವಗ್ರಾಮಕ್ಕೆ ಮಂಜುನಾಥ ರಾವ್ ಪಾರ್ಥಿವ ಶರೀರ; ಕಂಬನಿ ಮಿಡಿದ ಶಿವಮೊಗ್ಗ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

 

ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ಬರಮಾಡಿಕೊಂಡರು. ಮೃತ ಮಂಜುನಾಥ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

‘ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗುತ್ತಾ, ಜೆಸಿಬಿಯ ಮುಂಭಾಗ ಉಗ್ರರ ಪ್ರತಿಕೃತಿ ತೂಗುಹಾಕಿ ರ್‍ಯಾಲಿ ನಡೆಸಿ, ಪಾಕಿಸ್ತಾನ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ–ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!