ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬರಮಾಡಿಕೊಂಡರು. ಮೃತ ಮಂಜುನಾಥ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.
‘ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗುತ್ತಾ, ಜೆಸಿಬಿಯ ಮುಂಭಾಗ ಉಗ್ರರ ಪ್ರತಿಕೃತಿ ತೂಗುಹಾಕಿ ರ್ಯಾಲಿ ನಡೆಸಿ, ಪಾಕಿಸ್ತಾನ ವಿರುದ್ಧ ಆಕ್ರೋಶ ಹೊರಹಾಕಿದರು.
ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ–ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…