ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬರಮಾಡಿಕೊಂಡರು. ಮೃತ ಮಂಜುನಾಥ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.
‘ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗುತ್ತಾ, ಜೆಸಿಬಿಯ ಮುಂಭಾಗ ಉಗ್ರರ ಪ್ರತಿಕೃತಿ ತೂಗುಹಾಕಿ ರ್ಯಾಲಿ ನಡೆಸಿ, ಪಾಕಿಸ್ತಾನ ವಿರುದ್ಧ ಆಕ್ರೋಶ ಹೊರಹಾಕಿದರು.
ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ–ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…