ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ, CPR ಮತ್ತು ಪ್ರಥಮ ಚಿಕಿತ್ಸೆ ಕುರಿತಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್, ನಾಟೆಕಲ್, ಮಂಗಳೂರು ಸಹಯೋಗದಲ್ಲಿ ಆಯೋಜಿಸಲಾಯಿತು.
CPR ಕಾರ್ಡಿಯೋಪಲ್ಮನರಿ ರಿಸಸಿಟೇಷನ್ ಎಂದರೆ ಯಾರಾದರೊಬ್ಬರ ಹೃದಯ ಬಡಿತವು ನಿಂತಾಗ ತಕ್ಷಣವೇ ಮಾಡಬೇಕಾದ ತುರ್ತು ಚಿಕಿತ್ಸೆ ವಿಧಾನ. ಕಣಚೂರು ಮೆಡಿಕಲ್ ಸೈನ್ಸಸ್ ಸಂಸ್ಥೆ ಈ ರೀತಿಯ ಜೀವ ಉಳಿಸುವ ಕೌಶಲ್ಯಗಳ ಮಹತ್ವವನ್ನು ಎತ್ತಿ ಹಿಡಿಯುತ್ತದೆ.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಡಾ. ಪಿ.ಎಲ್. ಧರ್ಮ ಅವರು ‘ಅಪಘಾತಗಳು ಎಲ್ಲೆಲ್ಲಿಯೂ ಸಂಭವಿಸಬಹುದು. ಆದರೆ ನಾವು ಮೂಲಭೂತ ಕೌಶಲ್ಯಗಳಲ್ಲಿ ತರಬೇತಿಯನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಲಿಂಗ ಅಥವಾ ಧರ್ಮದ ಆಲೋಚನೆಯೆಲ್ಲವನ್ನೂ ಮರೆತು, ಹೆಚ್ಚಿನದಾಗಿ ಸಾಧನೆ ಮತ್ತು ಸಮಾಜ ಸೇವೆಯಲ್ಲಿ ತೊಡಗಬೇಕೆಂದು ಪ್ರೇರಣೆ ನೀಡಿದರು.
ಬಳಿಕ ಮಾತನಾಡಿದ ಇನ್ನೋರ್ವ ಉದ್ಘಾಟನಾಕಾರ ಡಾ. ಜಯರಾಜ್ ಅಮಿನ್ ಅವರು ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡ ಕಣಚೂರು ಸಂಸ್ಥೆಗೆ ಧನ್ಯವಾದ ತಿಳಿಸಿ, ಪದವಿಧರರಿಗೆ ಸಮುದಾಯ ಆಧಾರಿತ ಅಗತ್ಯ ಕೌಶಲ್ಯ ಕಲಿಸುವ ಮಹತ್ವವನ್ನು ವಿವರಿಸಿದರು.
ಗಣ್ಯ ಅತಿಥಿಯಾಗಿ ಭಾಗವಹಿಸಿದ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಮೊನಿಸ್ ಅವರು ಜೀವ ರಕ್ಷಕ ಕೌಶಲ್ಯವನ್ನು ಕಲಿಸುವ ಮೂಲಕ ಮಂಗಳೂರು ವಿಶ್ವವಿದ್ಯಾಲಯದ ನೇತೃತ್ವ ತಂಡದ ಪ್ರಯತ್ನವನ್ನು ಶ್ಲಾಘಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವೈದ್ಯಕೀಯ ವಿಭಾಗದ ಡಾ. ಶ್ರೀನಿವಾಸ್ (JR III) ಮತ್ತು ಡಾ. ಉಬೇದುಲ್ಲಾ (JR I) ಅವರು ಸಿಪಿಆರ್ ಕೌಶಲ್ಯಗಳ ಪ್ರಾಯೋಗಿಕ ಪ್ರದರ್ಶನದೊಂದಿಗೆ ಮಾಹಿತಿ ಕಾರ್ಯಾಗಾರ ನಡೆಸಿದರು .
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…