ಜನ ಮನದ ನಾಡಿ ಮಿಡಿತ

Advertisement

ಉದಾಂಪುರ್ : ಕಾಶ್ಮೀರದಲ್ಲಿ ಉಗ್ರರ ವಿರುದ್ಧ BSF ಕೂಂಬಿಂಗ್ ತೀವ್ರ; ಓರ್ವ ಯೋಧ ಹುತಾತ್ಮ

ಪಹಲ್ಗಾಮ್​​​ ದಾಳಿ ಬೆನ್ನಲ್ಲೇ ಬಿಎಸ್​ಎಫ್ ಪಡೆ ಉಗ್ರರ ವಿರುದ್ಧದ ಕೂಂಬಿಂಗ್ ತೀವ್ರಗೊಳಿಸಿದ್ದಾರೆ. ಪಹಲ್ಗಾಮ್ ದಾಳಿ ನಡೆದು ಎರಡು ದಿನದ ನಂತರ ಕಾಶ್ಮೀರದ ಉಧಮ್​​ಪುರದಲ್ಲಿ ಗುಂಡಿನ ಚಕಮಕಿ ನಡೆದಿದೆ.

ದುರಾದೃಷ್ಟವಶಾತ್ ಭಾರತೀಯ ಸೇನೆ ಓರ್ವ ಸೈನಿಕನನ್ನು ಕಳೆದುಕೊಂಡಿದೆ. ಉಗ್ರರು ಅಡಗಿರೋದು ಖಚಿತವಾಗಿತ್ತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಬಿಎಸ್​​ಎಫ್ ಪಡೆ ಜಂಟಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ಚಕಮಕಿ ಆಗಿದೆ.

ಈ ಘಟನೆಯಲ್ಲಿ ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆದಿತ್ತಾದರೂ, ಅವರು ಬದುಕುಳಿಯಲಿಲ್ಲ. ಭದ್ರತಾ ಸಿಬ್ಬಂದಿ ಇಂದು ಬೆಳಗ್ಗೆಯೇ ಉಧಮ್​ಪರ ಜಿಲ್ಲೆಯ ದುದು ಬಸಂತ್​ಗರ್ ಪ್ರದೇಶದಲ್ಲಿ ಆಪರೇಷನ್ ಶುರುಮಾಡಿತ್ತು. ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಯೋಧರತ್ತ ಫೈರಿಂಗ್ ಮಾಡಿರುವ ಉಗ್ರರು ಮತ್ತೆ ನಾಪತ್ತೆ ಆಗಿದ್ದಾರೆ. ಶೋಧಕಾರ್ಯ ಮುಂದುವರೆದಿದೆ ಎಂದು ಸೇನೆ ತಿಳಿಸಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!