ಪಹಲ್ಗಾಮ್ ದಾಳಿ ಬೆನ್ನಲ್ಲೇ ಬಿಎಸ್ಎಫ್ ಪಡೆ ಉಗ್ರರ ವಿರುದ್ಧದ ಕೂಂಬಿಂಗ್ ತೀವ್ರಗೊಳಿಸಿದ್ದಾರೆ. ಪಹಲ್ಗಾಮ್ ದಾಳಿ ನಡೆದು ಎರಡು ದಿನದ ನಂತರ ಕಾಶ್ಮೀರದ ಉಧಮ್ಪುರದಲ್ಲಿ ಗುಂಡಿನ ಚಕಮಕಿ ನಡೆದಿದೆ.
ದುರಾದೃಷ್ಟವಶಾತ್ ಭಾರತೀಯ ಸೇನೆ ಓರ್ವ ಸೈನಿಕನನ್ನು ಕಳೆದುಕೊಂಡಿದೆ. ಉಗ್ರರು ಅಡಗಿರೋದು ಖಚಿತವಾಗಿತ್ತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಬಿಎಸ್ಎಫ್ ಪಡೆ ಜಂಟಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ಚಕಮಕಿ ಆಗಿದೆ.
ಈ ಘಟನೆಯಲ್ಲಿ ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆದಿತ್ತಾದರೂ, ಅವರು ಬದುಕುಳಿಯಲಿಲ್ಲ. ಭದ್ರತಾ ಸಿಬ್ಬಂದಿ ಇಂದು ಬೆಳಗ್ಗೆಯೇ ಉಧಮ್ಪರ ಜಿಲ್ಲೆಯ ದುದು ಬಸಂತ್ಗರ್ ಪ್ರದೇಶದಲ್ಲಿ ಆಪರೇಷನ್ ಶುರುಮಾಡಿತ್ತು. ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಯೋಧರತ್ತ ಫೈರಿಂಗ್ ಮಾಡಿರುವ ಉಗ್ರರು ಮತ್ತೆ ನಾಪತ್ತೆ ಆಗಿದ್ದಾರೆ. ಶೋಧಕಾರ್ಯ ಮುಂದುವರೆದಿದೆ ಎಂದು ಸೇನೆ ತಿಳಿಸಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…