ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕಾಶ್ಮೀರ ಪಹಲ್ಗಾಮ್‌ ದುಷ್ಕೃತ್ಯ – ಬಿಷಪ್‌ ಖಂಡನೆ

ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ.

ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ.

ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.

ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್‌ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!