ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ.ಪೀಟರ್ ಪಾವ್ಲ್ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ.
ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ.
ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.
ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…