ಬೆಂಗಳೂರಿನಿಂದ ಸಂಗಮ ನೋಡಲು ತೆರಳಿದ್ದ ಎರಡು ಖಾಸಗಿ ಬಸ್ಗಳು ಅಪಘಾತಕ್ಕೀಡಾಗಿವೆ. ಮೊದಲ ಬಸ್ ಬ್ರೇಕ್ ಫೇಲ್ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಇದರ ಹಿಂದೆ ಇದ್ದ ಮತ್ತೊಂದು ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಹಳ್ಳಕ್ಕೆ ಬಿದ್ದ ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ ಗಾಯಾಳುಗಳಿಗೆ ಕನಕಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲ ಗಾಯಾಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಕ್ರಿಶ್ಚಿಯನ್ನರ ಹಬ್ಬದ ಹಿನ್ನೆಲೆಯಲ್ಲಿ ಮೊದಲು ಬೆಟ್ಟದ ಹಲಸೂರು ಗ್ರಾಮಕ್ಕೆ ಬಂದಿದ್ದರು. ಹಬ್ಬದ ಊಟ ಮುಗಿಸಿಕೊಂಡು ಸಂಗಮ ನೋಡಲು ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಗಾಯಾಳುಗಳು ಬೆಂಗಳೂರಿನ ಈಜಿಪುರ ನಿವಾಸಿಗಳು ಎಂದು ತಿಳಿದುಬಂದಿದೆ.
ಎರಡು ಬಸ್ಗಳಲ್ಲಿ ಬೆಂಗಳೂರಿನಿಂದ ಬೆಟ್ಟದ ಹಲಸೂರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಬಳಿಕ ಸಂಗಮ ನೋಡಲು ತೆರಳುತ್ತಿದ್ದರು. ಈ ವೇಳೆ ಮೊದಲ ಬಸ್ ರಸ್ತೆ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ಹಳಕ್ಕೆ ಬಿದ್ದಿದ್ದರೆ, ಇದರ ಹಿಂದೆ ಇದ್ದ ಮತ್ತೊಂದು ಬಸ್ ಕೂಡ ರಸ್ತೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…