ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಸಂದರ್ಭದಲ್ಲಿ ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕೃತವಾಗಿ ಉದ್ಘಾಟನೆಗೊಳಿಸಿದರು.
ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಈ ಬಾರಿಯ ಕಾಲೇಜಿನ ವಾರ್ಷಿಕೋತ್ಸವದ ಸಂಭ್ರಮವು ಬಹುಕಾಲ ನೆನಪಿನಲ್ಲಿ ಉಳಿಯಲಿದೆ. ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಲ್ಯಾಬ್ ನಿಂದಾಗಿ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲವಾಗಲಿದ್ದು, ಲ್ಯಾಬ್ ನ ಅಗತ್ಯತೆ ಬಗ್ಗೆ ಇಲ್ಲಿನ ಪ್ರಾಂಶುಪಾಲರು ನನ್ನ ಗಮನಕ್ಕೆ ತಂದ ಮರುಕ್ಷಣವೇ ಈ ಬಗ್ಗೆ ವಿಶೇಷ ಗಮನಹರಿಸಿ ಆದ್ಯತೆಯ ಮೇರೆಗೆ ಅನುಕೂಲ ಮಾಡಿಕೊಡುವಂತೆ ಇನ್ಫೋಸಿಸ್ ಸಂಸ್ಥೆಯನ್ನು ಕೋರಿದ್ದೆ. ಅದರಂತೆ ಇದೀಗ ಪದವಿ ಕಾಲೇಜಿಗೆ 30 ಕಂಪ್ಯೂಟರ್ ಗಳ ಸಹಿತ ಸುಸಜ್ಜಿತ ಲ್ಯಾಬ್ ನಿರ್ಮಾಣಗೊಂಡಿದ್ದು ವಿದ್ಯಾರ್ಥಿಗಳಿಗೆ ಒಳಿತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ. ಕೆ.ಆರ್. ಕವಿತ, ಇನ್ಫೋಸಿಸ್ ನ ಪ್ರಮುಖರಾದ ಸಂದೀಪ್ ಡಿಸಿಲ್ವ, ಪ್ರಾಂಶುಪಾಲರಾದ ಪ್ರೊ. ಜಗದೀಶ ಬಾಳ, ಡಾ. ಚಂದ್ರಶೇಖರ ಕೆ.,ವಿದ್ಯಾರ್ಥಿ ಪರಿಷತ್ತಿನ ಪ್ರಮುಖರು, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ-ರಕ್ಷಕ ಸಂಘ, ಹಳೆವಿದ್ಯಾರ್ಥಿ ಸಂಘ, ಬೋಧಕ ಹಾಗೂ ಬೋಧಕೇತರ ವೃಂದ ಮತ್ತು ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…