ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.),ಮೂಡುಬಿದಿರೆ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ ಇದೇ ಬರುವ ಏಪ್ರಿಲ್ 27 ರ ಭಾನುವಾರ ಅಪರಾಹ್ನ 4 ಗಂಟೆಯಿoದ ಪರಮಪೂಜ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭ। ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಮೂಡುಬಿದಿರೆಯ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯಾ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ಸಂಜೆ 4 ರಿಂದ 5ವರೆಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ಕಾರ್ಯಕ್ರಮ ನಂತರ ಸಂಜೆ 5ರಿಂದ ಭ।ಶ್ರೀ ಮಹಾವೀರ ಸ್ವಾಮಿ ಜಿನಬಿಂಬ ಮೆರವಣಿಗೆ, ಸಂಜೆ 5.15ರಿಂದ ತೋರಣ ಮುಹೂರ್ತ ಕಾರ್ಯಕ್ರಮ ಮತ್ತು ಸಂಜೆ 5.30ಕ್ಕೆ ಸರಿಯಾಗಿ ಜಯಶ್ರೀ ಡಿ. ಜೈನ್ ಹೊರನಾಡು ಅವರಿಂದ ಜಿನ ಗಾನಾಮೃತ ಜರುಗಲಿದೆ. ನಂತರ ಸಂಜೆ 5.45ರಿಂದ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6.30ಕ್ಕೆ ಸರಿಯಾಗಿ ಭ| ಶ್ರೀ ಮಹಾವೀರ ಸ್ವಾಮಿ ಜಿನ ಬಿಂಬಕ್ಕೆ ಮಂಗಳದ್ರವ್ಯಾಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆ ನೆರವೇರಲಿದೆ. ಸಂಜೆ 8 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರಕುಮಾರ್, ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ನ ಅಧ್ಯಕ್ಷ ಎಂ.ಎನ್.ರಾಜೇoದ್ರ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಾವೀರ ಜಯಂತಿಯ ಪೂರ್ವಭಾವಿಯಾಗಿ ನಡೆದ ಸ್ಪರ್ಧೆಗಳ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಉಮಾನಾಥ ಕೋಟ್ಯಾನ್, ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಸಮಾಜಭಾಂದವರು ಹಾಗೂ ಸರ್ವರಿಗೂ ಸ್ವಾಗತ ಕೋರಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಚೌಟರ ಅರಮನೆಯ ಕುಲದೀಪ್ ಎಂ, ಧನಕೀರ್ತಿ ಬಲಿಪ, ಆದಿರಾಜ್ ಜೈನ್, ವಕೀಲೆ ಶ್ವೇತಾ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…