ಶ್ವಾಸಕೋಶದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಲ್ಲಿ ಮಂಗಳೂರಿನ ಕೆ. ಎಸ್. ಹೆಗ್ಡೆ ಆಸ್ಪತ್ರೆ ಉನ್ನತ ಹಂತದ ಪ್ರಗತಿಯನ್ನು ಸಾಧಿಸಿದೆ. ಅತ್ಯಂತ ಕಠಿಣ ಎಂದು ಪರಿಗಣಿಸಲಾದ ಕ್ಯಾರಿನಲ್ ರಿಸೆಕ್ಷನ್ ಸರ್ಜರಿಯನ್ನು ಮೂರು ರೋಗಿಗಳಲ್ಲಿ ಯಶಸ್ವಿಯಾಗಿ ನಿರ್ವಹಿಸಿದೆ. ಇದು ತನ್ನ ಅತ್ಯಾಧುನಿಕ ವೈದ್ಯಕೀಯ ನವೀನ್ಯತೆ ಮತ್ಯು ಶ್ರೇಷ್ಠತೆಗೆ ತನ್ನ ಬದ್ಧತೆಯನ್ನು ಸಾಬೀತು ಪಡಿಸಿದೆ ಎಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಡೀನ್ ಡಾ. ಸಂದೀಪ್ ರೈ ತಿಳಿಸಿದರು.
ಮೂವರು ರೋಗಿಗಳ ಶ್ವಾಸಕೋಶದ ಕ್ಯಾನ್ಸರ್ ಚಿಕಿತ್ಸೆ ಬಗ್ಗೆ ವಿವರಿಸಿದ ಕ್ಯಾನ್ಸರ್ ಸರ್ಜನ್ ಡಾ. ವಿನಯ್ ಮಾತನಾಡಿ ಥೋರಸಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಲ್ಲಿ ಕ್ಯಾರಿನಲ್ ರಿಸೆಕ್ಷನ್ ತಾಂತ್ರಿಕವಾಗಿ ಅತ್ಯಂತ ಕಠಿಣವಾಗಿರುತ್ತದೆ. ಅಂತಹ ಒಂದು ಕಠಿಣ ಶಸ್ತ್ರ ಚಿಕಿತ್ಸೆಯನ್ನು ನಿರ್ವಹಿಸಲು ಅಪಾರ ಯೋಜನೆ, ನಿಖರತೆ, ಮತ್ತು ಬಹುವಿಭಾಗಗಳ ಪರಿಣತಿಯ ಅಗತ್ಯವಿರುತ್ತದೆ. ಕಡಿಮೆ ಅವಧಿಯಲ್ಲಿ 3 ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಮುಗಿಸಿರುವುದು ನಮ್ಮ ತಂಡಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಆಸ್ಪತ್ರೆಯ ಮುಂದುವರಿದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದರು.
ಈ ಪತ್ರಿಕಾಗೋಷ್ಟಿಯಲ್ಲಿ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಡೀನ್ ಡಾ. ಸಂದೀಪ್ ರೈ, ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಮೆಡಿಕಲ್ ಸೂಪರಿಂಡೆಂಟ್ ಡಾ. ಸುಮಲತಾ ಆರ್. ಶೆಟ್ಟಿ, ಇಂಟೆರ್ ವೆನ್ಷನಲ್ ಪಲ್ಮಾನಲಾಜಿಸ್ಟ್ ಡಾ. ಗಿರಿಧರ್ ಬಿ. ಎಚ್., ಅರವಳಿಕೆ ತಜ್ಞ ಡಾ. ಶ್ರೀಪಾದ ಜಿ. ಮೆಹಂದಳೆ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…