ರಾಷ್ಟ್ರೀಯ ಓಪನ್/ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ವರೆಗೆ ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ಚೆಸ್ ಅಸೋಸಿಯೇಷನ್ ಮಂಗಳೂರು ಇದರ ಅಧ್ಯಕ್ಷರಾದ ರಮೇಶ್ ಕೋಟೆ ತಿಳಿಸಿದರು.
ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಘೋಕೇಶ್ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ ನಂತರ ಚೆಸ್ಸಿನ ನವ ಯುಗ ಶುರುವಾಗಿದೆ. ಇದು ಮಂಗಳೂರಿಗೂ ಪ್ರಭಾವ ಬೀರಿದ್ದು, ನಗರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಚೆಸ್ ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಮಕ್ಕಳಲ್ಲಿ ಬುದ್ದಿವಂತಿಕೆ ಬೆಳವಣಿಗೆಯಾಗಲು ಚೆಸ್ ಸಹಕರಿಯಾಗಿದೆ. ದೇಶದ ಹಲವು ಭಾಗಗಳಿಂದ ಮಂಗಳೂರಿಗೆ ಚೆಸ್ ಟೆಸ್ಟ್ ಗೆ ಜನ ಬರುತ್ತಿದ್ದಾರೆ ಎಂದರು.
ಬಳಿಕ ಮಾತನಾಡಿದ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಸುನಿಲ್ ಆಚಾರ್ ಮಾತನಾಡಿ ಮಂಗಳೂರಿಗರು ಹೆಚ್ಚಾಗಿ ಚೆಸ್ ಆಡುವ ಮೂಲಕ ಮಂಗಳೂರನ್ನು ಚೆಸ್ ಹಬ್ ಮಾಡಬೇಕೆಂದು ಅಭಿಪ್ರಾಯ ಪಟ್ಟರು.
ಈ ಪತ್ರಿಕಾಗೋಷ್ಟಿಯಲ್ಲಿ ಗೌರವಾಧ್ಯಕ್ಷರಾದ ಸುನಿಲ್ ಆಚಾರ್, ಅಧ್ಯಕ್ಷರಾದ ರಮೇಶ್ ಕೋಟೆ, ಉಪಾಧ್ಯಕ್ಷರಾದ ವಾಣಿ ಎಸ್. ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರ್, ಜತೆಕಾರ್ಯದರ್ಶಿ ಸತ್ಯಪ್ರಸಾದ್ ಕೆ. ಮತ್ತಿತರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…