ರಾಷ್ಟ್ರೀಯ ಓಪನ್/ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ವರೆಗೆ ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ಚೆಸ್ ಅಸೋಸಿಯೇಷನ್ ಮಂಗಳೂರು ಇದರ ಅಧ್ಯಕ್ಷರಾದ ರಮೇಶ್ ಕೋಟೆ ತಿಳಿಸಿದರು.
ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಘೋಕೇಶ್ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ ನಂತರ ಚೆಸ್ಸಿನ ನವ ಯುಗ ಶುರುವಾಗಿದೆ. ಇದು ಮಂಗಳೂರಿಗೂ ಪ್ರಭಾವ ಬೀರಿದ್ದು, ನಗರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಚೆಸ್ ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಮಕ್ಕಳಲ್ಲಿ ಬುದ್ದಿವಂತಿಕೆ ಬೆಳವಣಿಗೆಯಾಗಲು ಚೆಸ್ ಸಹಕರಿಯಾಗಿದೆ. ದೇಶದ ಹಲವು ಭಾಗಗಳಿಂದ ಮಂಗಳೂರಿಗೆ ಚೆಸ್ ಟೆಸ್ಟ್ ಗೆ ಜನ ಬರುತ್ತಿದ್ದಾರೆ ಎಂದರು.
ಬಳಿಕ ಮಾತನಾಡಿದ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಸುನಿಲ್ ಆಚಾರ್ ಮಾತನಾಡಿ ಮಂಗಳೂರಿಗರು ಹೆಚ್ಚಾಗಿ ಚೆಸ್ ಆಡುವ ಮೂಲಕ ಮಂಗಳೂರನ್ನು ಚೆಸ್ ಹಬ್ ಮಾಡಬೇಕೆಂದು ಅಭಿಪ್ರಾಯ ಪಟ್ಟರು.
ಈ ಪತ್ರಿಕಾಗೋಷ್ಟಿಯಲ್ಲಿ ಗೌರವಾಧ್ಯಕ್ಷರಾದ ಸುನಿಲ್ ಆಚಾರ್, ಅಧ್ಯಕ್ಷರಾದ ರಮೇಶ್ ಕೋಟೆ, ಉಪಾಧ್ಯಕ್ಷರಾದ ವಾಣಿ ಎಸ್. ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರ್, ಜತೆಕಾರ್ಯದರ್ಶಿ ಸತ್ಯಪ್ರಸಾದ್ ಕೆ. ಮತ್ತಿತರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…