ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.
‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…