ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ, ವಾಲಿಬಾಲ್ ಆಟಗಾರ ಸೈಯದ್​​ ಎಂಬಾತನ ಕಾಮ ಸ್ವರೂಪ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.

ಸೈಯದ್​ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಓರ್ವ ವಿದ್ಯಾರ್ಥಿನಿಗೆ ಈತ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನು ಈ ಘಟನೆ ವೇಳೆ ಸೈಯದ್​​ ಮೊಬೈಲ್ ಕಿತ್ತುಕೊಂಡು ನೋಡಿದಾಗ ಆತನ ಮೊಬೈಲ್​ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳನ್ನು ಬೆಳಕಿಗೆ ಬಂದಿದೆ.

ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್​​ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!