ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ದಂಪತಿಗೆ ತಲವಾರು ಹಿಡಿದು ಬೆದರಿಕೆ: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಮೇಲೆ ಪ್ರಕರಣ ದಾಖಲು

ಹಿಂದೂ ಸಂಘಟನೆ ಹಾಗೂ ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಹಿಂದೂ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ.

ದೂರುದಾರ ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ ಹಸಂತಡ್ಕ, “ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಪಂಪ್ ಬಿಟ್ಟು ಕೊಡುವಂತೆ ಹೇಳು” ಎಂದು ಹರೀಶ್ ಪತ್ನಿ ಶ್ರೀದೇವಿ ಅವರಿಗೆ ಬೆದರಿಕೆಯೊಡ್ಡಿದ್ದಾಗಿ ಹೇಳಲಾಗಿದೆ. ಅಷ್ಟೇ ಅಲ್ಲದೇ, ಎಪ್ರಿಲ್ 19 ರಂದು ಮತ್ತೊಮ್ಮೆ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ತಲ್ವಾರ್ ಹಿಡಿದುಕೊಂಡು ಬಂದು ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ. ಈ ಕುರಿತು ನ್ಯಾಯಾಲಯದ ಆದೇಶದಂತೆ ವಿಟ್ಲ ಠಾಣೆಯಲ್ಲಿ ಬಿಜೆಪಿ ಮುಖಂಡ ಮುರಳೀಕೃಷ್ಣ ಹಸಂತಡ್ಕ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹರೀಶ್ ಪತ್ನಿ ಶ್ರೀದೇವಿ ಹಾಗೂ ಮುರಳೀಕೃಷ್ಣ ಹಸಂತಡ್ಕ ಸಾರಡ್ಕದ HP ಪೆಟ್ರೋಲ್ ಪಂಪ್‌ನಲ್ಲಿ ಪಾಲುದಾರಿಕೆ ಹೊಂದಿದ್ದು, ಇದೇ ವಿಚಾರವಾಗಿ ಬೆದರಿಕೆಯೊಡ್ಡಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!