ಹಿಂದೂ ಸಂಘಟನೆ ಹಾಗೂ ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಹಿಂದೂ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ.
ದೂರುದಾರ ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ ಹಸಂತಡ್ಕ, “ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಪಂಪ್ ಬಿಟ್ಟು ಕೊಡುವಂತೆ ಹೇಳು” ಎಂದು ಹರೀಶ್ ಪತ್ನಿ ಶ್ರೀದೇವಿ ಅವರಿಗೆ ಬೆದರಿಕೆಯೊಡ್ಡಿದ್ದಾಗಿ ಹೇಳಲಾಗಿದೆ. ಅಷ್ಟೇ ಅಲ್ಲದೇ, ಎಪ್ರಿಲ್ 19 ರಂದು ಮತ್ತೊಮ್ಮೆ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ತಲ್ವಾರ್ ಹಿಡಿದುಕೊಂಡು ಬಂದು ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ. ಈ ಕುರಿತು ನ್ಯಾಯಾಲಯದ ಆದೇಶದಂತೆ ವಿಟ್ಲ ಠಾಣೆಯಲ್ಲಿ ಬಿಜೆಪಿ ಮುಖಂಡ ಮುರಳೀಕೃಷ್ಣ ಹಸಂತಡ್ಕ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹರೀಶ್ ಪತ್ನಿ ಶ್ರೀದೇವಿ ಹಾಗೂ ಮುರಳೀಕೃಷ್ಣ ಹಸಂತಡ್ಕ ಸಾರಡ್ಕದ HP ಪೆಟ್ರೋಲ್ ಪಂಪ್ನಲ್ಲಿ ಪಾಲುದಾರಿಕೆ ಹೊಂದಿದ್ದು, ಇದೇ ವಿಚಾರವಾಗಿ ಬೆದರಿಕೆಯೊಡ್ಡಿರುವುದಾಗಿ ತಿಳಿದುಬಂದಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…