ಜನ ಮನದ ನಾಡಿ ಮಿಡಿತ

Advertisement

ಮಗನ ಕಾಲೇಜು ಶುಲ್ಕ ಪಾವತಿಸಲಾಗದೆ ಸ್ವಯಂ ಪ್ರಾಣತ್ಯಾಗ ಮಾಡಿದ ತಾಯಿ – ಅಪಘಾತದಲ್ಲಿ ಸತ್ತರೆ ಸರಕಾರದಿಂದ ಸಹಾಯ ಸಿಗುತ್ತದೆಂದು ಭಾವಿಸಿದ್ದ ಮಹಿಳೆ

ಮಗನ ಕಾಲೇಜು ಶುಲ್ಕ 45,000 ರೂಪಾಯಿ ಪಾವತಿಸಲು ಪರದಾಡುತ್ತಿದ್ದ ಮಹಿಳೆಯೊಬ್ಬರು, ಚಲಿಸುತ್ತಿದ್ದ ಬಸ್ಸಿಗೆ ಸ್ವಯಂ ಜಿಗಿದು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟರೆ ಸರ್ಕಾರದಿಂದ ನೆರವು ಸಿಗುತ್ತದೆಂದು ಈ ಮಹಿಳೆ ಹೀಗೆ ಮಾಡಿದ್ದಾಳೆ. ಜೂ.28ರಂದು ಈ ಘಟನೆ ನಡೆದಿದ್ದು, ಪೊಲೀಸರು ಅಪಘಾತ ಪ್ರಕರಣವೆಂದು ದಾಖಲಿಸಿಕೊಂಡಿದ್ದರು.

ಆದರೆ, ಬಳಿಕ ನಡೆದ ತನಿಖೆಯಲ್ಲಿ ಮಹಿಳೆಯು ಸ್ವಯಂ ಇಚ್ಛೆಯಿಂದ ಬಸ್ ನಡಿಗೆ ಬಿದ್ದಿರುವ ವೀಡಿಯೊ ಪತ್ತೆಯಾಗಿದೆ. ಬಸ್ ಬರುವುದನ್ನು ಗಮನಿಸಿಯೇ ಮಹಿಳೆ ಬಸ್ ನತ್ತ ಮುನ್ನುಗ್ಗಿರುವುದು ಕಂಡುಬಂದಿದೆ. ಸೇಲಂನ 45ರ ಹರೆಯದ ಪಾಪತಿ ಎಂಬ ಮಹಿಳೆ ತನ್ನ ಮಗನ ಕಾಲೇಜು ಶುಲ್ಕ 45,000 ರೂ. ಪಾವತಿಸಲಾಗದೆ ಖಿನ್ನತೆಗೊಳಗಾಗಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಸರಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂದು ಯಾರೋ ಹೇಳಿದ್ದನ್ನು ಕೇಳಿ, ಕಲೆಕ್ಟರ್ ಕಚೇರಿಯಲ್ಲಿ ನೈರ್ಮಲ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಸ್ವಯಂ ಪ್ರಾಣ ತ್ಯಾಗ ಮಾಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!