ಜನ ಮನದ ನಾಡಿ ಮಿಡಿತ

Advertisement

ಮಗನ ಕಾಲೇಜು ಶುಲ್ಕ ಪಾವತಿಸಲಾಗದೆ ಸ್ವಯಂ ಪ್ರಾಣತ್ಯಾಗ ಮಾಡಿದ ತಾಯಿ – ಅಪಘಾತದಲ್ಲಿ ಸತ್ತರೆ ಸರಕಾರದಿಂದ ಸಹಾಯ ಸಿಗುತ್ತದೆಂದು ಭಾವಿಸಿದ್ದ ಮಹಿಳೆ

ಮಗನ ಕಾಲೇಜು ಶುಲ್ಕ 45,000 ರೂಪಾಯಿ ಪಾವತಿಸಲು ಪರದಾಡುತ್ತಿದ್ದ ಮಹಿಳೆಯೊಬ್ಬರು, ಚಲಿಸುತ್ತಿದ್ದ ಬಸ್ಸಿಗೆ ಸ್ವಯಂ ಜಿಗಿದು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟರೆ ಸರ್ಕಾರದಿಂದ ನೆರವು ಸಿಗುತ್ತದೆಂದು ಈ ಮಹಿಳೆ ಹೀಗೆ ಮಾಡಿದ್ದಾಳೆ. ಜೂ.28ರಂದು ಈ ಘಟನೆ ನಡೆದಿದ್ದು, ಪೊಲೀಸರು ಅಪಘಾತ ಪ್ರಕರಣವೆಂದು ದಾಖಲಿಸಿಕೊಂಡಿದ್ದರು.

ಆದರೆ, ಬಳಿಕ ನಡೆದ ತನಿಖೆಯಲ್ಲಿ ಮಹಿಳೆಯು ಸ್ವಯಂ ಇಚ್ಛೆಯಿಂದ ಬಸ್ ನಡಿಗೆ ಬಿದ್ದಿರುವ ವೀಡಿಯೊ ಪತ್ತೆಯಾಗಿದೆ. ಬಸ್ ಬರುವುದನ್ನು ಗಮನಿಸಿಯೇ ಮಹಿಳೆ ಬಸ್ ನತ್ತ ಮುನ್ನುಗ್ಗಿರುವುದು ಕಂಡುಬಂದಿದೆ. ಸೇಲಂನ 45ರ ಹರೆಯದ ಪಾಪತಿ ಎಂಬ ಮಹಿಳೆ ತನ್ನ ಮಗನ ಕಾಲೇಜು ಶುಲ್ಕ 45,000 ರೂ. ಪಾವತಿಸಲಾಗದೆ ಖಿನ್ನತೆಗೊಳಗಾಗಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಸರಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂದು ಯಾರೋ ಹೇಳಿದ್ದನ್ನು ಕೇಳಿ, ಕಲೆಕ್ಟರ್ ಕಚೇರಿಯಲ್ಲಿ ನೈರ್ಮಲ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಸ್ವಯಂ ಪ್ರಾಣ ತ್ಯಾಗ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!