ಮಗನ ಕಾಲೇಜು ಶುಲ್ಕ 45,000 ರೂಪಾಯಿ ಪಾವತಿಸಲು ಪರದಾಡುತ್ತಿದ್ದ ಮಹಿಳೆಯೊಬ್ಬರು, ಚಲಿಸುತ್ತಿದ್ದ ಬಸ್ಸಿಗೆ ಸ್ವಯಂ ಜಿಗಿದು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟರೆ ಸರ್ಕಾರದಿಂದ ನೆರವು ಸಿಗುತ್ತದೆಂದು ಈ ಮಹಿಳೆ ಹೀಗೆ ಮಾಡಿದ್ದಾಳೆ. ಜೂ.28ರಂದು ಈ ಘಟನೆ ನಡೆದಿದ್ದು, ಪೊಲೀಸರು ಅಪಘಾತ ಪ್ರಕರಣವೆಂದು ದಾಖಲಿಸಿಕೊಂಡಿದ್ದರು.
ಆದರೆ, ಬಳಿಕ ನಡೆದ ತನಿಖೆಯಲ್ಲಿ ಮಹಿಳೆಯು ಸ್ವಯಂ ಇಚ್ಛೆಯಿಂದ ಬಸ್ ನಡಿಗೆ ಬಿದ್ದಿರುವ ವೀಡಿಯೊ ಪತ್ತೆಯಾಗಿದೆ. ಬಸ್ ಬರುವುದನ್ನು ಗಮನಿಸಿಯೇ ಮಹಿಳೆ ಬಸ್ ನತ್ತ ಮುನ್ನುಗ್ಗಿರುವುದು ಕಂಡುಬಂದಿದೆ. ಸೇಲಂನ 45ರ ಹರೆಯದ ಪಾಪತಿ ಎಂಬ ಮಹಿಳೆ ತನ್ನ ಮಗನ ಕಾಲೇಜು ಶುಲ್ಕ 45,000 ರೂ. ಪಾವತಿಸಲಾಗದೆ ಖಿನ್ನತೆಗೊಳಗಾಗಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಸರಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂದು ಯಾರೋ ಹೇಳಿದ್ದನ್ನು ಕೇಳಿ, ಕಲೆಕ್ಟರ್ ಕಚೇರಿಯಲ್ಲಿ ನೈರ್ಮಲ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಸ್ವಯಂ ಪ್ರಾಣ ತ್ಯಾಗ ಮಾಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…