ಮಗನ ಕಾಲೇಜು ಶುಲ್ಕ 45,000 ರೂಪಾಯಿ ಪಾವತಿಸಲು ಪರದಾಡುತ್ತಿದ್ದ ಮಹಿಳೆಯೊಬ್ಬರು, ಚಲಿಸುತ್ತಿದ್ದ ಬಸ್ಸಿಗೆ ಸ್ವಯಂ ಜಿಗಿದು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟರೆ ಸರ್ಕಾರದಿಂದ ನೆರವು ಸಿಗುತ್ತದೆಂದು ಈ ಮಹಿಳೆ ಹೀಗೆ ಮಾಡಿದ್ದಾಳೆ. ಜೂ.28ರಂದು ಈ ಘಟನೆ ನಡೆದಿದ್ದು, ಪೊಲೀಸರು ಅಪಘಾತ ಪ್ರಕರಣವೆಂದು ದಾಖಲಿಸಿಕೊಂಡಿದ್ದರು.
ಆದರೆ, ಬಳಿಕ ನಡೆದ ತನಿಖೆಯಲ್ಲಿ ಮಹಿಳೆಯು ಸ್ವಯಂ ಇಚ್ಛೆಯಿಂದ ಬಸ್ ನಡಿಗೆ ಬಿದ್ದಿರುವ ವೀಡಿಯೊ ಪತ್ತೆಯಾಗಿದೆ. ಬಸ್ ಬರುವುದನ್ನು ಗಮನಿಸಿಯೇ ಮಹಿಳೆ ಬಸ್ ನತ್ತ ಮುನ್ನುಗ್ಗಿರುವುದು ಕಂಡುಬಂದಿದೆ. ಸೇಲಂನ 45ರ ಹರೆಯದ ಪಾಪತಿ ಎಂಬ ಮಹಿಳೆ ತನ್ನ ಮಗನ ಕಾಲೇಜು ಶುಲ್ಕ 45,000 ರೂ. ಪಾವತಿಸಲಾಗದೆ ಖಿನ್ನತೆಗೊಳಗಾಗಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಸರಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂದು ಯಾರೋ ಹೇಳಿದ್ದನ್ನು ಕೇಳಿ, ಕಲೆಕ್ಟರ್ ಕಚೇರಿಯಲ್ಲಿ ನೈರ್ಮಲ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಸ್ವಯಂ ಪ್ರಾಣ ತ್ಯಾಗ ಮಾಡಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…