ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ಭೀಕರ ಅಪಘಾತ ಸಂಭವಿಸಿದೆ . ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದಿದೆ. ಇದರಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ. ಬಾವಿಗೆ ಬಿದ್ದವರನ್ನು ರಕ್ಷಿಸಲು ಹೋದ ಸ್ಥಳೀಯ ಯುವಕನೂ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಡಿಐಜಿ ಮನೋಜ್ ಸಿಂಗ್ ಅಧಿಕೃತವಾಗಿ ಸಾವನ್ನು ದೃಢಪಡಿಸಿದ್ದಾರೆ. ಉನ್ಹೆಲ್ ಮತ್ತು ರತ್ಲಂ ಜಿಲ್ಲೆಗಳ ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಗುರ್ತಿಸಲಾಗಿದೆ. ಇವರೆಲ್ಲಾ ನೀಮುಚ್ ಜಿಲ್ಲೆಯ ದೇವಸ್ಥಾನಕ್ಕೆ ಭೇಟಿ ನೀಡಲು ರತ್ಲಾಮ್ನ ಖೋಜಂಖೇಡಾ ಗ್ರಾಮದ ಮೂಲಕ ಸಂಚರಿಸುತ್ತಿದ್ದರು. ದಾರಿಯಲ್ಲಿ ವ್ಯಾನ್ ಬೈಕ್ಗೆ ಡಿಕ್ಕಿ ಹೊಡೆದಿದೆ.ಇದಾದ ನಂತರ, ವ್ಯಾನ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮುಚ್ಚದ ಬಾವಿಗೆ ಬಿದ್ದಿದೆ. ಘಟನೆಯನ್ನು ನೋಡುತ್ತಿದ್ದ ಸ್ಥಳೀಯ ಯುವಕನೊಬ್ಬ ಧೈರ್ಯ ಪ್ರದರ್ಶಿಸಿ ಜನರನ್ನು ರಕ್ಷಿಸಲು ಬಾವಿಗೆ ಹಾರಿದ್ದಾನೆ. ಕೊನೆಗೆ ಆತನೂ ಸಾವನ್ನಪ್ಪಿದ್ದಾನೆ.
ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ, ಪೊಲೀಸರು ಸೇರಿದಂತೆ ಆಡಳಿತ ಸಿಬ್ಬಂದಿ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಾವಿಗೆ ಬಿದ್ದ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಮನೋಹರ್ ಸಿಂಗ್ ಎಂಬ ಸ್ಥಳೀಯ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಕಾರಿನಲ್ಲಿ 13 ಜನರು ಪ್ರಯಾಣಿಸುತ್ತಿದ್ದು, ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಬಾವಿಗೆ ಬಿದ್ದ ನಂತರ, ವ್ಯಾನ್ನಿಂದ ಎಲ್ಪಿಜಿ ಅನಿಲ ಸೋರಿಕೆಯಾಗಲು ಪ್ರಾರಂಭಿಸಿದೆ. ಇದರಿಂದಾಗಿ ಒಳಗೆ ಸಿಲುಕಿದ್ದ ಜನರಿಗೆ ಉಸಿರುಗಟ್ಟುವಿಕೆ ಉಂಟಾಗಿ ಜನರ ಸಾವಿಗೆ ಕಾರಣವಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…