ಈ ಯುವಕನ ಹೆಸರು ಕಾರ್ತಿಕ್ ಅಂತ. ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯ ನಿವಾಸಿ. ಇವನಿಗೆ ಇನ್ನೂ 21 ವರ್ಷ ವಯಸ್ಸು. ಕಾರ್ತಿಕ್ಗೆ ಮದುವೆಯಾಗಿ ಒಂದು ವರ್ಷ ಆಗಿತ್ತು. ಕಳೆದ 8 ದಿನಗಳ ಹಿಂದಷ್ಟೇ ಕಾರ್ತಿಕ್ ಪತ್ನಿ ಮಗುವಿಗೆ ಜನ್ಮ ನೀಡಿದ್ದರು.
ಕಾರ್ತಿಕ್ ಸ್ನೇಹಿತರು ಮದ್ಯ ಸೇವನೆಗೆ ಬೆಟ್ಟಿಂಗ್ ಕಟ್ಟಿದ್ದಾರೆ. ನೀರು ಬೆರಸದೆ ಮದ್ಯ ಸೇವನೆ ಮಾಡಿದ್ರೆ 10 ರೂಪಾಯಿ ಕೊಡುವ ಸವಾಲು ಹಾಕಿದ್ದಾರೆ. ದುಡ್ಡಿನ ಆಸೆಗೆ ಚಾಲೆಂಜ್ ಒಪ್ಪಿಕೊಂಡ ಕಾರ್ತಿಕ್, 5 ಬಾಟಲಿ ಮದ್ಯವನ್ನು ನೀರು ಬೆರಸದೆ ಕುಡಿದಿದ್ದಾನೆ.
ನೀರು ಬೆರಸದೇ 5 ಬಾಟಲ್ ಕುಡಿದ ಮೇಲೆ ಕಾರ್ತಿಕ್ ತೀವ್ರ ಅಸ್ವಸ್ಥನಾಗಿದ್ದಾನೆ. ಸ್ನೇಹಿತರು ಈತನನ್ನು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. 10 ಸಾವಿರ ರೂಪಾಯಿ ಆಸೆಗೆ ಎಣ್ಣೆ ಕುಡಿದ ಕಾರ್ತಿಕ್ ಕೊನೆಗೆ ಉಸಿರೇ ಬಿಟ್ಟಿದ್ದಾನೆ.
ಕಾರ್ತಿಕ್ ಜೊತೆಗಿದ್ದ ವೆಂಕಟರೆಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರು ಬೆಟ್ ಕಟ್ಟಿದ್ದಾರೆ. ವೆಂಕಟರೆಡ್ಡಿ 5 ಬಾಟಲ್ ಮದ್ಯ ಸೇವಿಸಿದರೆ 10 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದರಂತೆ. ನಂಗಲಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿದ್ದು, ವೆಂಕಟರೆಡ್ಡಿ, ಸುಬ್ರಮಣಿ ಅನ್ನು ಬಂಧಿಸಿ, ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…