ಈ ಯುವಕನ ಹೆಸರು ಕಾರ್ತಿಕ್ ಅಂತ. ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯ ನಿವಾಸಿ. ಇವನಿಗೆ ಇನ್ನೂ 21 ವರ್ಷ ವಯಸ್ಸು. ಕಾರ್ತಿಕ್ಗೆ ಮದುವೆಯಾಗಿ ಒಂದು ವರ್ಷ ಆಗಿತ್ತು. ಕಳೆದ 8 ದಿನಗಳ ಹಿಂದಷ್ಟೇ ಕಾರ್ತಿಕ್ ಪತ್ನಿ ಮಗುವಿಗೆ ಜನ್ಮ ನೀಡಿದ್ದರು.
ಕಾರ್ತಿಕ್ ಸ್ನೇಹಿತರು ಮದ್ಯ ಸೇವನೆಗೆ ಬೆಟ್ಟಿಂಗ್ ಕಟ್ಟಿದ್ದಾರೆ. ನೀರು ಬೆರಸದೆ ಮದ್ಯ ಸೇವನೆ ಮಾಡಿದ್ರೆ 10 ರೂಪಾಯಿ ಕೊಡುವ ಸವಾಲು ಹಾಕಿದ್ದಾರೆ. ದುಡ್ಡಿನ ಆಸೆಗೆ ಚಾಲೆಂಜ್ ಒಪ್ಪಿಕೊಂಡ ಕಾರ್ತಿಕ್, 5 ಬಾಟಲಿ ಮದ್ಯವನ್ನು ನೀರು ಬೆರಸದೆ ಕುಡಿದಿದ್ದಾನೆ.
ನೀರು ಬೆರಸದೇ 5 ಬಾಟಲ್ ಕುಡಿದ ಮೇಲೆ ಕಾರ್ತಿಕ್ ತೀವ್ರ ಅಸ್ವಸ್ಥನಾಗಿದ್ದಾನೆ. ಸ್ನೇಹಿತರು ಈತನನ್ನು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. 10 ಸಾವಿರ ರೂಪಾಯಿ ಆಸೆಗೆ ಎಣ್ಣೆ ಕುಡಿದ ಕಾರ್ತಿಕ್ ಕೊನೆಗೆ ಉಸಿರೇ ಬಿಟ್ಟಿದ್ದಾನೆ.
ಕಾರ್ತಿಕ್ ಜೊತೆಗಿದ್ದ ವೆಂಕಟರೆಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರು ಬೆಟ್ ಕಟ್ಟಿದ್ದಾರೆ. ವೆಂಕಟರೆಡ್ಡಿ 5 ಬಾಟಲ್ ಮದ್ಯ ಸೇವಿಸಿದರೆ 10 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದರಂತೆ. ನಂಗಲಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿದ್ದು, ವೆಂಕಟರೆಡ್ಡಿ, ಸುಬ್ರಮಣಿ ಅನ್ನು ಬಂಧಿಸಿ, ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…