ಪಹಲ್ಗಾಮ್ ದಾಳಿಯ ಬಳಿಕ ಜಮ್ಮು ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಸೇನೆಯನ್ನು ಗಡಿಯಲ್ಲಿ ಭಾರತದ ಯೋಧರು ಹಿಮ್ಮೆಟ್ಟಿಸುತ್ತಿದ್ದಾರೆ. ಭಾರತದ ಸೇನೆಯ ಈ ಸಮರಾಭ್ಯಾಸ ಪಾಕಿಸ್ತಾನಕ್ಕೆ ನಡುಕವನ್ನು ಉಂಟು ಮಾಡಿದೆ.
ಭಾರತದಿಂದ ಪಾಕಿಸ್ತಾನದ ಮೇಲೆ ಯಾವುದೇ ಕ್ಷಣದಲ್ಲಾದರೂ ದಾಳಿ ಮಾಡುವ ಭೀತಿ ಎದುರಾಗಿದೆ. ಇದರಿಂದ ಪಾಕಿಸ್ತಾನ ಸೈನಿಕರ ಮನೋಸ್ಥೈರ್ಯ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ ಬರೋಬ್ಬರಿ 1,200 ಮಂದಿ ಪಾಕ್ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ನೀಡಿದ್ದಾರೆ.
ಪಾಕಿಸ್ತಾನದ ಸೇನಾ ಆಫೀಸರ್, ಸೈನಿಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೆ ಭಾರತದ ಯುದ್ಧದ ಭೀತಿ ಒಂದು ಕಾರಣವಾದ್ರೆ, ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ನಡೆ, ಧೋರಣೆ ಮತ್ತೊಂದು ಪ್ರಮುಖ ಕಾರಣವಾಗಿದೆ.
ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಮೇಲೆ ಸೈನಾಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ಈ ಹಿಂದೆಯೇ ಸೇನಾಧಿಕಾರಿಗಳು ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ಭಾರತ- ಪಾಕ್ ಯುದ್ಧ ಭೀತಿಯ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಲ್ಲಿ 1,200 ಮಂದಿ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ಸಲ್ಲಿಸಿದ್ದಾರೆ. ಪಾಕ್ ಸೇನೆಯಲ್ಲಿ ಸೇನಾ ಮುಖ್ಯಸ್ಥರ ವಿರುದ್ಧವೇ ಭಾರೀ ಅಸಮಾಧಾನ ಸ್ಫೋಟವಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…