ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಂಗಳೂರು : ಮಂಗಳೂರಿಗರಿಗೆ ಸದ್ಯಕ್ಕಿಲ್ಲ ನೀರಿನ ಕೊರತೆ

ಕರಾವಳಿಯಲ್ಲಿ ಈ ಬಾರಿ ತಾಪಮಾನ ಹಿಂದೆಂದಿಗಿಂತಲೂ ಅಧಿಕವಾಗಿದೆ. ಈ ಬಿರುಬೇಸಿಗೆಯಲ್ಲಿಯೂ ಮಂಗಳೂರು ನಗರದಲ್ಲಿ ಕುಡಿಯುವ ನೀರಿಗಿಲ್ಲ ಆತಂಕ ಎಂಬುದು ನೆಮ್ಮದಿಗೆ ಕಾರಣವಾಗಿದೆ.

ಸಾಧಾರಣವಾಗಿ ಮಂಗಳೂರು ನಗರಕ್ಕೆ ಏಪ್ರಿಲ್-ಮೇ ತಿಂಗಳಲ್ಲಿ ಕುಡಿಯವ ನೀರಿಗೆ ಬರ ಉಂಟಾಗುತ್ತದೆ. ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ರೇಶನಿಂಗ್ ಮಾಡುವ ಪ್ರಮೇಯ ಉಂಟಾಗುತ್ತದೆ.‌ ದಿನಬಿಟ್ಟು ದಿನ, ಎರಡು ದಿನಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ನೀರು ಪೂರೈಕೆಯ ಪರಿಣಾಮ ನಗರದ ಹಲವೆಡೆ ನೀರಿನ ಸಮಸ್ಯೆ ಎದುರಾಗುತ್ತದೆ.

ಆದರೆ ಈ ಬಾರಿ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರು ಲಭ್ಯತೆ ಹೇರಳವಾಗಿದೆ. ಅಲ್ಲದೇ ನೇತ್ರಾವತಿ ನದಿ ತೀರದುದ್ದಕ್ಕೂ ಇರುವ ಅಣೆಕಟ್ಟು ಗಳಲ್ಲಿ ನೀರಿನ ಸಂಗ್ರಹ ಸಾಕಷ್ಟಿದೆ. ಈ ಹಿಂದೆ ತುಂಬೆ ಅಣೆಕಟ್ಟು ಒಂದೇ ಕುಡಿಯುವ ನೀರಿನ ಸಂಗ್ರಹಕ್ಕೆ ಪ್ರಧಾನವಾಗಿತ್ತು. ಆದರೆ ಈಗ ಬಿಳಿಯೂರು, ಎಎಂಆರ್, ಜಕ್ರಿಬೆಟ್ಟು ಡ್ಯಾಮ್ ಗಳಲ್ಲಿ ನೀರಿನ ಶೇಖರಣೆ ಭರ್ತಿಯಾಗಿದೆ.

ಸಾಕಷ್ಟು ಭಾಗಗಳಲ್ಲಿ ನೇತ್ರಾವತಿ ನದಿ ತೀರದ ಕೃಷಿಕರು ತಮ್ಮ ಬೆಳೆಗಳಿಗೆ ನೇತ್ರಾವತಿ ನದಿ ತೀರವನ್ನೇ ಆಶ್ರಯಿಸಿದ್ದಾರೆ. ಬೇಸಿಗೆ ಕಾಲದಲ್ಲಿ ನೀರಿನ ಅಭಾವದ‌ ಸೂಚನೆ ಸಿಗುತ್ತಿದ್ದಂತೆಯೇ ಜಿಲ್ಲಾಡಳಿತ ಕೃಷಿಕರ ಪಂಪ್ ಸೆಟ್‌ಗಳ‌ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿತ್ತು. ಆದರೆ ಈ ಬಾರಿ ನದಿಯಲ್ಲಿ‌ ನೀರಿನ ಮಟ್ಟ ಬೇಕಾದಷ್ಟಿದ್ದು, ಕೃಷಿಕರೂ ನಿರಾಳರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಡ್ಯಾಂಗಳಲ್ಲಿ ಪ್ರಸ್ತುತ ಎಎಂಆರ್ ಡ್ಯಾಮ್‌ನಲ್ಲಿ 18.90 ಮೀ. ನೀರು, ತುಂಬೆ ಡ್ಯಾಮ್‌ನಲ್ಲಿ 5.70 ಮೀ. ನೀರು, ಹರೇಕಳ ಅಡ್ಯಾರ್ ಡ್ಯಾಮ್‌ನಲ್ಲಿ 1 ಮೀ. ನೀರು, ಬಿಳಿಯೂರು ಡ್ಯಾಮ್‌ನಲ್ಲಿ 4 ಮೀ. ನೀರು, ಜಕ್ರಿಬೆಟ್ಟು ಡ್ಯಾಮ್‌ನಲ್ಲಿ 3 ಮೀ. ನೀರು, ಮಳವೂರು ಡ್ಯಾಮ್‌ನಲ್ಲಿ 1.50 ಮೀ. ನೀರು, ಇರುವೈಲು ಡ್ಯಾಮ್‌ನಲ್ಲಿ 1.75 ಮೀ. ನೀರು ಲಭ್ಯವಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!