ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಮಂಗಳೂರಿಗರಿಗೆ ಸದ್ಯಕ್ಕಿಲ್ಲ ನೀರಿನ ಕೊರತೆ

ಕರಾವಳಿಯಲ್ಲಿ ಈ ಬಾರಿ ತಾಪಮಾನ ಹಿಂದೆಂದಿಗಿಂತಲೂ ಅಧಿಕವಾಗಿದೆ. ಈ ಬಿರುಬೇಸಿಗೆಯಲ್ಲಿಯೂ ಮಂಗಳೂರು ನಗರದಲ್ಲಿ ಕುಡಿಯುವ ನೀರಿಗಿಲ್ಲ ಆತಂಕ ಎಂಬುದು ನೆಮ್ಮದಿಗೆ ಕಾರಣವಾಗಿದೆ.

ಸಾಧಾರಣವಾಗಿ ಮಂಗಳೂರು ನಗರಕ್ಕೆ ಏಪ್ರಿಲ್-ಮೇ ತಿಂಗಳಲ್ಲಿ ಕುಡಿಯವ ನೀರಿಗೆ ಬರ ಉಂಟಾಗುತ್ತದೆ. ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ರೇಶನಿಂಗ್ ಮಾಡುವ ಪ್ರಮೇಯ ಉಂಟಾಗುತ್ತದೆ.‌ ದಿನಬಿಟ್ಟು ದಿನ, ಎರಡು ದಿನಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ನೀರು ಪೂರೈಕೆಯ ಪರಿಣಾಮ ನಗರದ ಹಲವೆಡೆ ನೀರಿನ ಸಮಸ್ಯೆ ಎದುರಾಗುತ್ತದೆ.

ಆದರೆ ಈ ಬಾರಿ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರು ಲಭ್ಯತೆ ಹೇರಳವಾಗಿದೆ. ಅಲ್ಲದೇ ನೇತ್ರಾವತಿ ನದಿ ತೀರದುದ್ದಕ್ಕೂ ಇರುವ ಅಣೆಕಟ್ಟು ಗಳಲ್ಲಿ ನೀರಿನ ಸಂಗ್ರಹ ಸಾಕಷ್ಟಿದೆ. ಈ ಹಿಂದೆ ತುಂಬೆ ಅಣೆಕಟ್ಟು ಒಂದೇ ಕುಡಿಯುವ ನೀರಿನ ಸಂಗ್ರಹಕ್ಕೆ ಪ್ರಧಾನವಾಗಿತ್ತು. ಆದರೆ ಈಗ ಬಿಳಿಯೂರು, ಎಎಂಆರ್, ಜಕ್ರಿಬೆಟ್ಟು ಡ್ಯಾಮ್ ಗಳಲ್ಲಿ ನೀರಿನ ಶೇಖರಣೆ ಭರ್ತಿಯಾಗಿದೆ.

ಸಾಕಷ್ಟು ಭಾಗಗಳಲ್ಲಿ ನೇತ್ರಾವತಿ ನದಿ ತೀರದ ಕೃಷಿಕರು ತಮ್ಮ ಬೆಳೆಗಳಿಗೆ ನೇತ್ರಾವತಿ ನದಿ ತೀರವನ್ನೇ ಆಶ್ರಯಿಸಿದ್ದಾರೆ. ಬೇಸಿಗೆ ಕಾಲದಲ್ಲಿ ನೀರಿನ ಅಭಾವದ‌ ಸೂಚನೆ ಸಿಗುತ್ತಿದ್ದಂತೆಯೇ ಜಿಲ್ಲಾಡಳಿತ ಕೃಷಿಕರ ಪಂಪ್ ಸೆಟ್‌ಗಳ‌ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿತ್ತು. ಆದರೆ ಈ ಬಾರಿ ನದಿಯಲ್ಲಿ‌ ನೀರಿನ ಮಟ್ಟ ಬೇಕಾದಷ್ಟಿದ್ದು, ಕೃಷಿಕರೂ ನಿರಾಳರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಡ್ಯಾಂಗಳಲ್ಲಿ ಪ್ರಸ್ತುತ ಎಎಂಆರ್ ಡ್ಯಾಮ್‌ನಲ್ಲಿ 18.90 ಮೀ. ನೀರು, ತುಂಬೆ ಡ್ಯಾಮ್‌ನಲ್ಲಿ 5.70 ಮೀ. ನೀರು, ಹರೇಕಳ ಅಡ್ಯಾರ್ ಡ್ಯಾಮ್‌ನಲ್ಲಿ 1 ಮೀ. ನೀರು, ಬಿಳಿಯೂರು ಡ್ಯಾಮ್‌ನಲ್ಲಿ 4 ಮೀ. ನೀರು, ಜಕ್ರಿಬೆಟ್ಟು ಡ್ಯಾಮ್‌ನಲ್ಲಿ 3 ಮೀ. ನೀರು, ಮಳವೂರು ಡ್ಯಾಮ್‌ನಲ್ಲಿ 1.50 ಮೀ. ನೀರು, ಇರುವೈಲು ಡ್ಯಾಮ್‌ನಲ್ಲಿ 1.75 ಮೀ. ನೀರು ಲಭ್ಯವಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!